23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

ಅಳದಂಗಡಿ: ಸಂಸ್ಕಾರ ಭಾರತಿ ಬೆಳ್ತಂಗಡಿ ಹಾಗೂ ಹನುಮೋತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರ ಗೌರವಾಧ್ಯಕ್ಷತೆಯಲ್ಲಿ,ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಎ.12 ರಂದು ಹನುಮ ಜಯಂತಿಯ ಅಂಗವಾಗಿ ನಡೆಯುವ ಹನುಮೋತ್ಸವ ಕಾರ್ಯಕ್ರಮದ ಆಚರಣೆಯ ಪೂರ್ವಭಾವಿ ಸಭೆಯು ಶ್ರೀ ಸತ್ಯದೇವತಾ ದೈವಸ್ಥಾನದ ವಠಾರದಲ್ಲಿ ಮಾ.10 ರಂದು ನಡೆಯಿತು.

ಸಂಸ್ಕಾರ ಭಾರತಿ ಬೆಳ್ತಂಗಡಿ ಘಟಕ ಇದರ ಅಧ್ಯಕ್ಷರಾದ ಸಂಪತ್ ಬಿ ಸುವರ್ಣ ಮಾತನಾಡಿ ಅಪಾರ ಭಕ್ತಿಯಿಂದ ಆಚರಿಸಲಾಗುವ ಹಿಂದೂ ಹಬ್ಬವಾದ ಹನುಮಾನ್ ಜಯಂತಿಯನ್ನು ಅತ್ಯಂತ ಶ್ರದ್ದಾ ಭಕ್ತಿಯಿಂದ ಪೂಜಿಸುವ ಸಲುವಾಗಿ ಎ.12 ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈಗಾಗಲೇ ಕಾರ್ಯಕ್ರಮದ ಯಶಸ್ವಿಗೆ ರೂಪುರೇಷೆ ತಯಾರಿಸಲಾಗಿದೆ. ಅಳದಂಗಡಿ ವಲಯದ ಸುಮಾರು 22 ಗ್ರಾಮಗಳ ಭಕ್ತರು ಬ್ರಹತ್ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಭಕ್ತಿ ಪ್ರಧಾನವಾದ ಈ ಕಾರ್ಯಕ್ರಮಕ್ಕೆ ಹಿಂದೂ ಭಾಂಧವರು ಸಹಕರಿಸಬೇಕು ಎಂದರು.ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಮಾತನಾಡಿ ಸತ್ಯದೇವತಾ ದೈವಸ್ಥಾನದ ಪರಿಸರದಲ್ಲಿ ನಡೆಯುವ ಹನುಮೋತ್ಸವಕ್ಕೆ ಸಂಪೂರ್ಣ ಬೆಂಬಲ ಹಾಗೂ ಸಹಕಾರವಿದೆ. ರಾಮನ ಮೇಲಿನ ಅಚಲ ಭಕ್ತಿಗೆ ಹೆಸರುವಾಸಿಯಾದ ಹನುಮಂತನನ್ನು ಪೂಜಿಸುವ ಕಾರ್ಯ ಹನುಮೋತ್ಸವ ಮೂಲಕ ನಡೆಯುತ್ತಿರುವುದು ಸಂತೋಷ ತಂದಿದೆ ಎಂದರು.

ವೇದಿಕೆಯಲ್ಲಿ ತಾ.ಪಂ ಮಾಜಿ ಸದಸ್ಯ ಪ್ರಭಾಕರ ಶೆಟ್ಟಿ ಉಪ್ಪಡ್ಕ, ವಿಜಯ ಗೌಡ ವೇಣೂರು,ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸದಸ್ಯ ಶಶಿಧರ ಎ ಜೈನ್ ಉಪಸ್ಥಿತರಿದ್ದರು. ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಸ್ವಾಗತಿಸಿ, ವಂದಿಸಿದರು‌.ಪೂರ್ವಭಾವಿ ಸಭೆಯಲ್ಲಿ ನೂರಾರು ಹಿಂದೂ ಭಾಂಧವರು,ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಿ, ಸೂಕ್ತ ರೀತಿಯಲ್ಲಿ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಹನುಮೋತ್ಸವ- 2025 ಸಮಿತಿ ರಚಿಸಲಾಯಿತು. ಸಮಿತಿ ಗೌರವ ಅಧ್ಯಕ್ಷರಾಗಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರನ್ನು ಆಯ್ಕೆ ಮಾಡಲಾಯಿತು.ಹಾಗೂ ಸಮಿತಿ ಸಂಚಾಲಕರನ್ನು,ಉಪ ಸಮಿತಿಗಳನ್ನು ರಚಿಸಲಾಯಿತು.

ಹನುಮೋತ್ಸವ ನಮ್ಮೆಲ್ಲರ ಭಕ್ತಿಯ ಸಂಕೇತ : ಸಂಪತ್ ಬಿ ಸುವರ್ಣಅಳದಂಗಡಿ ವಲಯದ 22 ಗ್ರಾಮಗಳ ಮನೆ ಮನೆಗೆ ತೆರಳಿ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸುವುದು, ವೃತಧಾರಿಗಳು ಮೂರು ದಿನಗಳ ವೃತಾಚರಣೆ ಕೈಗೊಳ್ಳುವುದು, ಎಳ್ಲುಗಂಟು ಮಂತ್ರಾಕ್ಷತೆ ವಿತರಣೆ, 25 ಭಜನಾ ತಂಡಗಳಿಂದ ಭಜನೋತ್ಸವ,ಹನುಮ ಸಹಸ್ರ ಕದಳಿ ಯಾಗ, ಸಾಮೂಹಿಕ ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ,ಹನುಮಯಾಗ ಪೂರ್ಣಾಹುತಿ,ಪ್ರಸಾದ ವಿತರಣೆ,ಲಂಕಾದಹನ, ಬೆಡಿ ಪ್ರದರ್ಶನ,ಧಾರ್ಮಿಕ ಸಭಾ ಕಾರ್ಯಕ್ರಮ,ಅನ್ನಪ್ರಸಾದ ವಿತರಣೆ ಬಳಿಕ ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ನಾಟಕ ಪ್ರದರ್ಶನ ಎಂದು ಸಮಿತಿ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿದರು.

Related posts

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya
error: Content is protected !!