37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಕಣಿಯೂರು: ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಕಣಿಯೂರು ಇದರ ವಾರ್ಷಿಕ ಮಹಾಸಭೆ ಮಾ.11 ರಂದು ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಗೀತಾ ವಹಿಸಿದ್ದರು. ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಜೀವಿನಿ ಸಂಘದ ಸದಸ್ಯೆ ಶೀಲರವರು ಪ್ರಾರ್ಥನೆಯನ್ನು ಮಾಡಿದರು.ಎಂ. ಬಿಕೆ ರತ್ನಾವತಿ ಒಕ್ಕೂಟದ ವಾರ್ಷಿಕ ವರದಿ ಹಾಗೂ ಒಕ್ಕೂಟದ ಜಮಾ & ಖರ್ಚು ಮಂಡಿಸಿ ಅನುಮೋದಯನ್ನು ಪಡೆದರು.

ವಲಯ ಮೇಲ್ವಿಚಾರಕರಾದ ವೀಣಾಶ್ರಿ ಸಂಜೀವಿನಿ ಯೋಜನೆಯ ಧ್ಯೇಯೋದ್ಧೇಶಗಳ ಬಗ್ಗೆ ಜೀವನೋಪಾಯ ಚಟುವಟಿಕೆ, ವಾರ್ಡ್ ಒಕ್ಕೂಟದ ರಚನೆ ಬಗ್ಗೆ ಹಾಗೂ ಒಕ್ಕೂಟದಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಇತರ ಹಲವಾರು ವಿಷಯಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಮಾಹಿತಿಯನ್ನು ಸದಸ್ಯರಿಗೆ ನೀಡಿದರು. ಉಷಾ ಕಾಮತ್ ಸರ್ಕಾರ ನೀಡುವ ವಿಮಾ ಸೌಲಭ್ಯಗಳ ಬಗ್ಗೆ ಇತರ ಬ್ಯಾಂಕಿನ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದರು. ಸಂಘದ ಸದಸ್ಯರಿಗೆ ಕೆಲವೊಂದು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಅತೀ ಹೆಚ್ಚು ಸಾಲ ಪಡೆದ ಸಂಘವನ್ನು ಗುರುತಿಸಿ ಸ್ಮರಣಿಕೆ ನೀಡಲಾಯಿತು. ಒಕ್ಕೂಟಕ್ಕೆ ನೂತನವಾಗಿ ಆಯ್ಕೆಗೊಂಡ ಸದಸ್ಯರುಗಳನ್ನು ಪರಿಚಯದೊಂದಿಗೆ, ನಿರ್ಗಮಿತ ಸದಸ್ಯರುಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು ಜೊತೆಗೆ ನೂತನ ಸಮಿತಿಗೆ ಪುಷ್ಟ ಗುಚ್ಛದೊಂದಿಗೆ ದಾಖಲಾತಿಗಳನ್ನು ಸಲ್ಲಿಸುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಲಾಯಿತು ಪಂಚಾಯತ್ ಅಧ್ಯಕ್ಷರು ಸ್ವಚ್ಛ ತೆಯ ಬಗ್ಗೆ ಒಕ್ಕೂಟದ ಬಗ್ಗೆ ಮೆಚ್ಚುಗೆ ತಿಳಿಸಿದರು. ನಿರ್ಗಮಿತ ಅಧ್ಯಕ್ಷರು ಅನಿಸಿಕೆಯನ್ನು ಹಂಚಿಕೊಂಡರು ಸಂಘದ ಸದಸ್ಯರು ತಯಾರಿಸಿದ ಪಿನಾಯಿಲನ್ನು ಬಿಡುಗಡೆ ಮಾಡಲಾಯಿತು. ಕೃಷಿ ಸಖಿ ಕಾರ್ಯಕ್ರಮ ನಿರೂಪಣೆ ಮಾಡಿದರು.ಎಲ್.ಸಿ ಆರ್ ಪಿ ಸ್ವಾಗತಿಸಿದರು. ಸ್ವಚ್ಛ ವಾಹನದ ಡ್ರೈವರ್ ಶ್ವೇತ ರವರು ಧನ್ಯವಾದವಿತ್ತರು.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya
error: Content is protected !!