March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಆಯೋಜಿಸಲಾದ 3ನೇ ವರ್ಷದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಸಂಘದ ಕಚೇರಿಯಲ್ಲಿ ವಿಜೃಂಭಣೆಯಿಂದ ನೆರವೇರಿತು.

ಸಂಘದ ಪ್ರಮುಖ ಸದಸ್ಯರು ಈ ಸಂದರ್ಭದಲ್ಲಿ ಭಾಗವಹಿಸಿ, ಈ ವರ್ಷದ ಕ್ರೀಡಾಕೂಟದ ವೈಶಿಷ್ಟ್ಯಗಳನ್ನು ಹಂಚಿಕೊಂಡರು.ಈ ಬಾರಿ ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಪುರುಷ ಮತ್ತು ಮಹಿಳಾ ವಿಭಾಗಗಳ ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಏಪ್ರಿಲ್ 20, 2025, ಶನಿವಾರ, ಸಂಜೆ 5:00 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ, ಕಾಯತ್ತಡ್ಕ, ಕಳಂಜದಲ್ಲಿ ಈ ಕ್ರೀಡಾ ಹಬ್ಬ ಅದ್ಧೂರಿಯಾಗಿ ನಡೆಯಲಿದೆ.

ವಿಶೇಷ ಆಕರ್ಷಣೆ: ಈ ಸಂದರ್ಭದಲ್ಲಿ ಗ್ರಾಮದ ಡಾಕ್ಟರೇಟ್ ಪದವಿಯನ್ನು ಪಡೆದವರನ್ನು, ಕ್ರೀಡಾ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದವರನ್ನು ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡ ನಡೆಯಲಿದೆ.

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಮಾಜ ಸೇವೆ, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಂಘದ ಒಗ್ಗಟ್ಟನ್ನು ಬಲಪಡಿಸುವ ಗುರಿ ಹೊಂದಿದ್ದು, ಈ ಕ್ರೀಡಾಕೂಟವು ಯುವ ಕ್ರೀಡಾಪಟುಗಳಿಗೆ ಮಹತ್ವದ ವೇದಿಕೆ ಒದಗಿಸುತ್ತದೆ. ಎಲ್ಲಾ ಕ್ರೀಡಾಪ್ರೇಮಿಗಳು ಮತ್ತು ಸ್ಪರ್ಧಿಗಳು ಈ ಕ್ರೀಡಾ ಹಬ್ಬದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya
error: Content is protected !!