23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಆಯೋಜಿಸಲಾದ 3ನೇ ವರ್ಷದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಸಂಘದ ಕಚೇರಿಯಲ್ಲಿ ವಿಜೃಂಭಣೆಯಿಂದ ನೆರವೇರಿತು.

ಸಂಘದ ಪ್ರಮುಖ ಸದಸ್ಯರು ಈ ಸಂದರ್ಭದಲ್ಲಿ ಭಾಗವಹಿಸಿ, ಈ ವರ್ಷದ ಕ್ರೀಡಾಕೂಟದ ವೈಶಿಷ್ಟ್ಯಗಳನ್ನು ಹಂಚಿಕೊಂಡರು.ಈ ಬಾರಿ ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಪುರುಷ ಮತ್ತು ಮಹಿಳಾ ವಿಭಾಗಗಳ ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಏಪ್ರಿಲ್ 20, 2025, ಶನಿವಾರ, ಸಂಜೆ 5:00 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ, ಕಾಯತ್ತಡ್ಕ, ಕಳಂಜದಲ್ಲಿ ಈ ಕ್ರೀಡಾ ಹಬ್ಬ ಅದ್ಧೂರಿಯಾಗಿ ನಡೆಯಲಿದೆ.

ವಿಶೇಷ ಆಕರ್ಷಣೆ: ಈ ಸಂದರ್ಭದಲ್ಲಿ ಗ್ರಾಮದ ಡಾಕ್ಟರೇಟ್ ಪದವಿಯನ್ನು ಪಡೆದವರನ್ನು, ಕ್ರೀಡಾ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದವರನ್ನು ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡ ನಡೆಯಲಿದೆ.

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಮಾಜ ಸೇವೆ, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಂಘದ ಒಗ್ಗಟ್ಟನ್ನು ಬಲಪಡಿಸುವ ಗುರಿ ಹೊಂದಿದ್ದು, ಈ ಕ್ರೀಡಾಕೂಟವು ಯುವ ಕ್ರೀಡಾಪಟುಗಳಿಗೆ ಮಹತ್ವದ ವೇದಿಕೆ ಒದಗಿಸುತ್ತದೆ. ಎಲ್ಲಾ ಕ್ರೀಡಾಪ್ರೇಮಿಗಳು ಮತ್ತು ಸ್ಪರ್ಧಿಗಳು ಈ ಕ್ರೀಡಾ ಹಬ್ಬದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ.

Related posts

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

Suddi Udaya

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!