March 14, 2025
Uncategorized

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

ಮಡಂತ್ಯಾರು : ಕಲೆಯೇ ಯೂರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಬೆಳಿಗ್ಗೆ ಷಡಾಧಾರ ಪ್ರತಿಷ್ಠೆ, ಹಾಗೂ ರಾತ್ರಿ ಗರ್ಭನ್ಯಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪದ್ಮನಾಭ ತಂತ್ರಿ ಅರವತ್ತ್ ಅವರ ನೇತೃತ್ವದಲ್ಲಿ ವೈದಿಕ,ವಿಧಿ-ವಿಧಾನಗಳೊಂದಿಗೆ ನೆರವೇರಿಸಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಡಳಿತ ಕುಲಸಚಿವ ಮತ್ತು ಸಂಸ್ಕೃತ ವಿಭಾಗದ ಡಾ.ಶ್ರೀಧರ ಭಟ್ ಧಾರ್ಮಿಕ ಚಿಂತನೆ ಬಗ್ಗೆ ಉಪನ್ಯಾಸ ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷತಿಮ್ಮಯ್ಯ ಗೌಡ, ಕೋಂಗುಜೆ ಅಧ್ಯಕ್ಷತೆ ವಹಿಸಿದ್ದರು.ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಯಾಮಣಿ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿದುಗ್ಗೇ ಗೌಡ ಅಂತರ, ಪ್ರಧಾನ ಸಂಚಾಲಕರಾದ ಪ್ರಚಂಡಭಾನು ಭಟ್ ಪಾಂಬೇಲು, ಅನುವಂಶಿಕ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಡೆಂಬುಗ, ಯಾದವ ಗೌಡ ತೋಟ, ಪ್ರಧಾನ ಅರ್ಚಕರಾದ ಪ್ರಶಾಂತ ಹೊಳ್ಳ ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ.ಕಾಲೇಜು ಉಪನ್ಯಾಸಕರಾದ ಡಾ.ದಿವಾ ಕೊಕ್ಕಡ ನಿರೂಪಣೆ ಮಾಡಿದರು. ವಿವಿಧ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಭಕ್ತರು ಮತ್ತಿತರರಿದ್ದರು.

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Suddi Udaya
error: Content is protected !!