23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು.

ಈ ಮಹತ್ವದ ಹೆದ್ದಾರಿ ಯೋಜನೆಯನ್ನು ಮುಂದುವರಿಸಲು ಅರಣ್ಯ ಇಲಾಖೆ ಸಹಿತ ಅಗತ್ಯ ಅನುಮತಿಗಳಿಗೆ ಇರುವ ಆಡಳಿತಾತ್ಮಕ ಅಡೆ-ತಡೆಗಳನ್ನು ನಿವಾರಿಸಲು ಹಾಗೂ ಕೆಲ ಅಧಿಕಾರಶಾಹಿ ಅಡೆ-ತಡೆ ನಿವಾರಣೆಗೆ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲು ಸಚಿವರ ಮಧ್ಯಪ್ರವೇಶವನ್ನು ಸಂಸದರು ಕೋರಿಕೊಂಡರು ಹಾಗೂ ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಿಸ್ತೃತ ಯೋಜನಾ ವರದಿಯ ಪ್ರಗತಿ ಹಾಗೂ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ನಡೆಯುತ್ತಿರುವ ಇತರ ಕಾಮಗಾರಿಗಳ ಬಗ್ಗೆ ಸಚಿವರಿಗೆ ಅವರು ಮಾಹಿತಿ ನೀಡಿದರು..

Related posts

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

Suddi Udaya

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya
error: Content is protected !!