32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

ಮರೋಡಿ: ನಿನ್ನೆ ಸುರಿದ ಸಿಡಿಲು ಸಹಿತ ಭಾರಿ ಗಾಳಿ ಮಳೆಗೆ ಬೃಹತ್‌ ಗಾತ್ರದ ಮರವೊಂದು ಮನೆ ಮೇಲೆ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಮರೋಡಿಯಲ್ಲಿ ನಡೆದಿದೆ.

ನಿನ್ನೆ ಸಂಜೆ ಸಮಯಕ್ಕೆ ತಾಲೂಕಿನಾದ್ಯಂತ ಗಾಳಿ ಮಳೆಯಾಗಿದೆ. ಮರೋಡಿಯಲ್ಲಿಯೂ ಮಳೆಯ ಪ್ರಮಾಣ ಜೋರಾಗಿತ್ತು. ಸಂಜೆ 6.30ಕ್ಕೆ ಸುರಿದ ಜೋರಾದ ಮಳೆಗೆ ಬೃಹತ್‌ ಗಾತ್ರದ ಮರ ಬುಡ ಸಮೇತ ಸಂತೋಷ್ ದೇವಾಡಿಗರವರ ಮನೆಯ ಮೇಲೆ ಉರುಳಿ ಬಿದ್ದಿದೆ. ಮನೆಯಲ್ಲಿ ಸಂತೋಷ ದೇವಾಡಿಗ ಅವರ ತಾಯಿ ಲಲಿತಾ, ತಮ್ಮ ಸಂದೀಪ್ ದೇವಾಡಿಗ, ತಮ್ಮನ ಪತ್ನಿ ರಜನಿ, ಸಣ್ಣ ಪ್ರಾಯದ ಮಗು ಮನೆಯೊಳಗೆ ಇದ್ದರು. ಜೋರಾದ ಶಬ್ದ ಬಂದಾಗ ಎಲ್ಲರೂ ಮನೆಯ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಯ ಹಂಚು, ಶೀಟ್, ಅಡುಗೆ ಪಾತ್ರೆ, ಟಿವಿ, ಕಿಟಕಿ, ದಾರಂದ, ವಿದ್ಯುತ್ ಉಪಕರಣಗಳು ಎಲ್ಲವೂ ಹಾನಿಗೊಳಗಾಗಿದೆ.ಲಕ್ಷಾಂತರ ರೂ ನಷ್ಟ ಸಂಭವಿಸಬಹುದೆಂದು ತಿಳಿದು ಬಂದಿದೆ.

ಮಾಹಿತಿ ತಿಳಿದ ತಕ್ಷಣ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಕಂದಾಯ ಇಲಾಖಾ ಅಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ಸ್ಥಳೀಯರಾದ ಸೂರಾಜ್ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

Related posts

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya
error: Content is protected !!