23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

ಮರೋಡಿ: ನಿನ್ನೆ ಸುರಿದ ಸಿಡಿಲು ಸಹಿತ ಭಾರಿ ಗಾಳಿ ಮಳೆಗೆ ಬೃಹತ್‌ ಗಾತ್ರದ ಮರವೊಂದು ಮನೆ ಮೇಲೆ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಮರೋಡಿಯಲ್ಲಿ ನಡೆದಿದೆ.

ನಿನ್ನೆ ಸಂಜೆ ಸಮಯಕ್ಕೆ ತಾಲೂಕಿನಾದ್ಯಂತ ಗಾಳಿ ಮಳೆಯಾಗಿದೆ. ಮರೋಡಿಯಲ್ಲಿಯೂ ಮಳೆಯ ಪ್ರಮಾಣ ಜೋರಾಗಿತ್ತು. ಸಂಜೆ 6.30ಕ್ಕೆ ಸುರಿದ ಜೋರಾದ ಮಳೆಗೆ ಬೃಹತ್‌ ಗಾತ್ರದ ಮರ ಬುಡ ಸಮೇತ ಸಂತೋಷ್ ದೇವಾಡಿಗರವರ ಮನೆಯ ಮೇಲೆ ಉರುಳಿ ಬಿದ್ದಿದೆ. ಮನೆಯಲ್ಲಿ ಸಂತೋಷ ದೇವಾಡಿಗ ಅವರ ತಾಯಿ ಲಲಿತಾ, ತಮ್ಮ ಸಂದೀಪ್ ದೇವಾಡಿಗ, ತಮ್ಮನ ಪತ್ನಿ ರಜನಿ, ಸಣ್ಣ ಪ್ರಾಯದ ಮಗು ಮನೆಯೊಳಗೆ ಇದ್ದರು. ಜೋರಾದ ಶಬ್ದ ಬಂದಾಗ ಎಲ್ಲರೂ ಮನೆಯ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಯ ಹಂಚು, ಶೀಟ್, ಅಡುಗೆ ಪಾತ್ರೆ, ಟಿವಿ, ಕಿಟಕಿ, ದಾರಂದ, ವಿದ್ಯುತ್ ಉಪಕರಣಗಳು ಎಲ್ಲವೂ ಹಾನಿಗೊಳಗಾಗಿದೆ.ಲಕ್ಷಾಂತರ ರೂ ನಷ್ಟ ಸಂಭವಿಸಬಹುದೆಂದು ತಿಳಿದು ಬಂದಿದೆ.

ಮಾಹಿತಿ ತಿಳಿದ ತಕ್ಷಣ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಕಂದಾಯ ಇಲಾಖಾ ಅಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ಸ್ಥಳೀಯರಾದ ಸೂರಾಜ್ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

Related posts

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya
error: Content is protected !!