September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

ಮರೋಡಿ: ನಿನ್ನೆ ಸುರಿದ ಸಿಡಿಲು ಸಹಿತ ಭಾರಿ ಗಾಳಿ ಮಳೆಗೆ ಬೃಹತ್‌ ಗಾತ್ರದ ಮರವೊಂದು ಮನೆ ಮೇಲೆ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಮರೋಡಿಯಲ್ಲಿ ನಡೆದಿದೆ.

ನಿನ್ನೆ ಸಂಜೆ ಸಮಯಕ್ಕೆ ತಾಲೂಕಿನಾದ್ಯಂತ ಗಾಳಿ ಮಳೆಯಾಗಿದೆ. ಮರೋಡಿಯಲ್ಲಿಯೂ ಮಳೆಯ ಪ್ರಮಾಣ ಜೋರಾಗಿತ್ತು. ಸಂಜೆ 6.30ಕ್ಕೆ ಸುರಿದ ಜೋರಾದ ಮಳೆಗೆ ಬೃಹತ್‌ ಗಾತ್ರದ ಮರ ಬುಡ ಸಮೇತ ಸಂತೋಷ್ ದೇವಾಡಿಗರವರ ಮನೆಯ ಮೇಲೆ ಉರುಳಿ ಬಿದ್ದಿದೆ. ಮನೆಯಲ್ಲಿ ಸಂತೋಷ ದೇವಾಡಿಗ ಅವರ ತಾಯಿ ಲಲಿತಾ, ತಮ್ಮ ಸಂದೀಪ್ ದೇವಾಡಿಗ, ತಮ್ಮನ ಪತ್ನಿ ರಜನಿ, ಸಣ್ಣ ಪ್ರಾಯದ ಮಗು ಮನೆಯೊಳಗೆ ಇದ್ದರು. ಜೋರಾದ ಶಬ್ದ ಬಂದಾಗ ಎಲ್ಲರೂ ಮನೆಯ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಯ ಹಂಚು, ಶೀಟ್, ಅಡುಗೆ ಪಾತ್ರೆ, ಟಿವಿ, ಕಿಟಕಿ, ದಾರಂದ, ವಿದ್ಯುತ್ ಉಪಕರಣಗಳು ಎಲ್ಲವೂ ಹಾನಿಗೊಳಗಾಗಿದೆ.ಲಕ್ಷಾಂತರ ರೂ ನಷ್ಟ ಸಂಭವಿಸಬಹುದೆಂದು ತಿಳಿದು ಬಂದಿದೆ.

ಮಾಹಿತಿ ತಿಳಿದ ತಕ್ಷಣ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಕಂದಾಯ ಇಲಾಖಾ ಅಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ಸ್ಥಳೀಯರಾದ ಸೂರಾಜ್ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

Related posts

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ಕಿಲ್ಲೂರು ಮುಹಿಯದ್ದೀನ್ ಜುಮಾ ಮಸೀದಿಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya
error: Content is protected !!