March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.೧೪ ರಿಂದ ಪ್ರಾರಂಭಗೊಂಡು ಮಾ.೧೯ರವರೆಗೆ ನಡೆಯಲಿದೆ.


ಮಾ.14 ರಂದು ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಗಂಟೆ 9.30ಕ್ಕೆ ಪಡ್ಡ್ಯೋಡಿಗುತ್ತಿನಲ್ಲಿ ಉಪಹಾರ ರಾತ್ರಿ ಗಂಟೆ 10.00 ಕ್ಕೆ ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿಯುವುದು, ಪಡ್ಡ್ಯಾರಬೆಟ್ಟಕ್ಕೆ ಆಗಮನ, ಧ್ವಜಾರೋಹಣ, ಬಲಿ, ಚೆಂಡು ನಡೆಯಲಿದೆ.
ಮಾ.15 ರಂದು ಭೂತಬಲಿ ಉತ್ಸವ, ಮಾ.16 ರಂದು ಅಂಬೋಡಿ, ಬಲಿ ಉತ್ಸವ, ಹೂವಿನ ಪೂಜೆ, ರಥಾರೋಹಣ, ಮಾ.17 ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ ಗಂಟೆ ೧೨ಕ್ಕೆ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ 1.30 ರಿಂದ 7.30 ರ ತನಕ ಮಹಾ ಅನ್ನಸಂತರ್ಪಣೆ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ, ಮಾ.18 ರಂದು ಧ್ವಜ ಅವರೋಹಣ, ಸಂಪ್ರೋಕ್ಷಣೆ ಪಡ್ಡ್ಯೋಡಿ ಗುತ್ತಿಗೆ ಭಂಡಾರ ಹಿಂದಿರುಗುವುದು. ಮಾ.19 ರಂದು ರಾತ್ರಿ ಗಂಟೆ 7.30 ರಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ. ರಾತ್ರಿ ಗಂಟೆ 8 ರಿಂದ ಜೀ ಕನ್ನಡ ಸರಿಗಮಪ ಖ್ಯಾತಿಯ ಕರ್ನಾಟಕದ ಹೆಸರಾಂತ ಕಲಾವಿದೆ ವಿದುಷಿ ಸಾಧ್ವಿನಿ ಕೊಪ್ಪ ಮತ್ತು ತಂಡದವರಿಂದ ಗಾನ ಸುರಭಿ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಅನುವಂಶೀಯ ಆಡಳಿತದಾರರು ಎ. ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿಯವರು ಪಡ್ಡ್ಯೋಡಿಗುತ್ತು ತಿಳಿಸಿದ್ದಾರೆ.
ಪ್ರತಿ ಸಂಕ್ರಮಣ ಮತ್ತು ಜಾತ್ರಾ ಸಮಯದ 5 ದಿನಗಳು ಅನ್ನಸಂತರ್ಪಣೆ ಸೇವೆ ನಡೆಯಲಿರುವುದು.

Related posts

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya
error: Content is protected !!