32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.೧೪ ರಿಂದ ಪ್ರಾರಂಭಗೊಂಡು ಮಾ.೧೯ರವರೆಗೆ ನಡೆಯಲಿದೆ.


ಮಾ.14 ರಂದು ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಗಂಟೆ 9.30ಕ್ಕೆ ಪಡ್ಡ್ಯೋಡಿಗುತ್ತಿನಲ್ಲಿ ಉಪಹಾರ ರಾತ್ರಿ ಗಂಟೆ 10.00 ಕ್ಕೆ ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿಯುವುದು, ಪಡ್ಡ್ಯಾರಬೆಟ್ಟಕ್ಕೆ ಆಗಮನ, ಧ್ವಜಾರೋಹಣ, ಬಲಿ, ಚೆಂಡು ನಡೆಯಲಿದೆ.
ಮಾ.15 ರಂದು ಭೂತಬಲಿ ಉತ್ಸವ, ಮಾ.16 ರಂದು ಅಂಬೋಡಿ, ಬಲಿ ಉತ್ಸವ, ಹೂವಿನ ಪೂಜೆ, ರಥಾರೋಹಣ, ಮಾ.17 ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ ಗಂಟೆ ೧೨ಕ್ಕೆ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ 1.30 ರಿಂದ 7.30 ರ ತನಕ ಮಹಾ ಅನ್ನಸಂತರ್ಪಣೆ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ, ಮಾ.18 ರಂದು ಧ್ವಜ ಅವರೋಹಣ, ಸಂಪ್ರೋಕ್ಷಣೆ ಪಡ್ಡ್ಯೋಡಿ ಗುತ್ತಿಗೆ ಭಂಡಾರ ಹಿಂದಿರುಗುವುದು. ಮಾ.19 ರಂದು ರಾತ್ರಿ ಗಂಟೆ 7.30 ರಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ. ರಾತ್ರಿ ಗಂಟೆ 8 ರಿಂದ ಜೀ ಕನ್ನಡ ಸರಿಗಮಪ ಖ್ಯಾತಿಯ ಕರ್ನಾಟಕದ ಹೆಸರಾಂತ ಕಲಾವಿದೆ ವಿದುಷಿ ಸಾಧ್ವಿನಿ ಕೊಪ್ಪ ಮತ್ತು ತಂಡದವರಿಂದ ಗಾನ ಸುರಭಿ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಅನುವಂಶೀಯ ಆಡಳಿತದಾರರು ಎ. ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿಯವರು ಪಡ್ಡ್ಯೋಡಿಗುತ್ತು ತಿಳಿಸಿದ್ದಾರೆ.
ಪ್ರತಿ ಸಂಕ್ರಮಣ ಮತ್ತು ಜಾತ್ರಾ ಸಮಯದ 5 ದಿನಗಳು ಅನ್ನಸಂತರ್ಪಣೆ ಸೇವೆ ನಡೆಯಲಿರುವುದು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya
error: Content is protected !!