March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

ಕೊಯ್ಯೂರು: ಇಲ್ಲಿಯ ಇತಿಹಾಸಪ್ರಸಿದ್ದ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆಯು ಶ್ರೀ ವೇದಮೂರ್ತಿ ನಂದಕುಮಾರ ತಂತ್ರಿ ರವರ ನೇತೃತ್ವದಲ್ಲಿ ಮಾ.15 ರಿಂದ ಮಾ.19 ರವರೆಗೆ ವಿದ್ಯುಕ್ತವಾಗಿ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಕೆ.ಬಿ. ಹರಿಶ್ಚಂದ್ರ ಬಲ್ಲಾಳ್ ಕೊಯ್ಯೂರುಗುತ್ತು ತಿಳಿಸಿದ್ದಾರೆ.

ಮಾ.15ರಂದು ಬೆಳಿಗ್ಗೆ ವೈದಿಕ ವಿಧಿವಿಧಾನಗಳು, ರಾತ್ರಿ ಉತ್ಸವ, ಮಹಾಪೂಜೆ, ಬಲಿ. ಮಾ.16ರಂದು ಬೆಳಿಗ್ಗೆ ಉತ್ಸವ, ಕಲಶಾಭಿಷೇಕ, ಮಹಾಪೂಜೆ, ರಾತ್ರಿ ಉತ್ಸವ, ಪಡಿಯಕ್ಕಿ, ಮಹಾಪೂಜೆ, ಬಲಿ. ಮಾ.17ರಂದು ಬೆಳಿಗ್ಗೆ ದರ್ಶನ ಬಲಿ, ಕಲಶಾಭಿಷೇಕ, ಮಹಾಪೂಜೆ, ಚಂಡಿಕಾ ಹೋಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಕೊಟ್ಟಿಗೆ ಕೆಲಸ, ಮಹಾರಥೋತ್ಸವ ಮಹಾಪೂಜೆ, ಭೂತಬಲಿ, ಕವಾಟ ಬಂಧನ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಮಾರಿ ನಂದನ ಮಾಲೆಂಕಿ ರವರಿಂದ ಸಂಗೀತ ಕಚೇರಿ ನಡೆಯಲಿದೆ. ಕೊಯ್ಯೂರು ಸುಂದರ ದೇವಾಡಿಗ ಮತ್ತು ಬಳಗದಿಂದ ಚೆಂಡೆ ವಾದನ, ಉಮಾನಾಥ ದೇವಾಡಿಗ ಅಶ್ವಥಪುರ ಮತ್ತು ಬಳಗದಿಂದ ನಾದಸ್ವರ ವಾದನ ನಡೆಯಲಿದೆ.

ಮಾ.18ರಂದು ಬೆಳಿಗ್ಗೆ ಕವಾಟ ಉದ್ಘಾಟನೆ, ಅಭಿಷೇಕ, ಪ್ರಸನ್ನಪೂಜೆ, ಮೂಲಸ್ಥಾನ ಗುಂಡದಿಂದ ಭಂಡಾರದ ಆಗಮನ, ಮಹಾಪೂಜೆ ಹಾಗೂ ಶ್ರೀಮತಿ ಸುಕನ್ಯಾ ದಿನೇಶ್ ಮತ್ತು ಬಳಗದಿಂದ ಸಂಗೀತ ಕಛೇರಿ, ಶ್ರೀ ಪಂಚದುರ್ಗಾ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ, ಕೊಲ್ಯೂರು ಭಾಸ್ಕರ ಮತ್ತು ಬಳಗದಿಂದ ವಿಶೇಷ ಚೆಂಡೆ ಸೇವೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಬೆಳ್ತಂಗಡಿ ‘ಶೆಟ್ಟಿ ಆರ್ಟ್ಸ್’ ಗಿರಿಧರ ಶೆಟ್ಟಿ ಬಳಗದವರಿಂದ ವಿನೂತನ ಶೈಲಿಯ ನೃತ್ಯ, ಶ್ರೀ ಪಂಚದುರ್ಗಾಪರಮೇಶ್ವರಿ ಗೆಳೆಯರ ಬಳಗ ಕೊಯ್ಯೂರು ಇವರಿಂದ ಚೇತನ್ ವರ್ಕಾಡಿ ವಿರಚಿತ “ಏರಾದುಪ್ಪು” ತುಳು ಹಾಸ್ಯ ಸಾಂಸಾರಿಕ ನಾಟಕ, ರಾತ್ರಿ 9ರಿಂದ ಧರ್ಮದೈವಗಳ ನೇಮೋತ್ಸವ, ಶ್ರೀ ದೇವರ ಉತ್ಸವ, ಶ್ರೀ ಉಳ್ಳಾಲ್ತಿ ನೇಮೋತ್ಸವ, ಮಹಾಪೂಜೆ ನಡೆಯಲಿದೆ.ಮಾ.19ರಂದು ಬೆಳಿಗ್ಗೆ ವೈದಿಕ ವಿಧಿವಿಧಾನಗಳು ಜರುಗಲಿದೆ.

ಮಾ.25 ರಂದು ಜಾತ್ರಾ ಪ್ರಯುಕ್ತ ಸಂಜೆ 6:30ರಿಂದ ಬಪ್ಪನಾಡು ಮೇಳದವರಿಂದ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಜರುಗಲಿದೆ.

Related posts

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!