23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

ಕೊಯ್ಯೂರು: ಇಲ್ಲಿಯ ಇತಿಹಾಸಪ್ರಸಿದ್ದ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆಯು ಶ್ರೀ ವೇದಮೂರ್ತಿ ನಂದಕುಮಾರ ತಂತ್ರಿ ರವರ ನೇತೃತ್ವದಲ್ಲಿ ಮಾ.15 ರಿಂದ ಮಾ.19 ರವರೆಗೆ ವಿದ್ಯುಕ್ತವಾಗಿ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಕೆ.ಬಿ. ಹರಿಶ್ಚಂದ್ರ ಬಲ್ಲಾಳ್ ಕೊಯ್ಯೂರುಗುತ್ತು ತಿಳಿಸಿದ್ದಾರೆ.

ಮಾ.15ರಂದು ಬೆಳಿಗ್ಗೆ ವೈದಿಕ ವಿಧಿವಿಧಾನಗಳು, ರಾತ್ರಿ ಉತ್ಸವ, ಮಹಾಪೂಜೆ, ಬಲಿ. ಮಾ.16ರಂದು ಬೆಳಿಗ್ಗೆ ಉತ್ಸವ, ಕಲಶಾಭಿಷೇಕ, ಮಹಾಪೂಜೆ, ರಾತ್ರಿ ಉತ್ಸವ, ಪಡಿಯಕ್ಕಿ, ಮಹಾಪೂಜೆ, ಬಲಿ. ಮಾ.17ರಂದು ಬೆಳಿಗ್ಗೆ ದರ್ಶನ ಬಲಿ, ಕಲಶಾಭಿಷೇಕ, ಮಹಾಪೂಜೆ, ಚಂಡಿಕಾ ಹೋಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಕೊಟ್ಟಿಗೆ ಕೆಲಸ, ಮಹಾರಥೋತ್ಸವ ಮಹಾಪೂಜೆ, ಭೂತಬಲಿ, ಕವಾಟ ಬಂಧನ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಮಾರಿ ನಂದನ ಮಾಲೆಂಕಿ ರವರಿಂದ ಸಂಗೀತ ಕಚೇರಿ ನಡೆಯಲಿದೆ. ಕೊಯ್ಯೂರು ಸುಂದರ ದೇವಾಡಿಗ ಮತ್ತು ಬಳಗದಿಂದ ಚೆಂಡೆ ವಾದನ, ಉಮಾನಾಥ ದೇವಾಡಿಗ ಅಶ್ವಥಪುರ ಮತ್ತು ಬಳಗದಿಂದ ನಾದಸ್ವರ ವಾದನ ನಡೆಯಲಿದೆ.

ಮಾ.18ರಂದು ಬೆಳಿಗ್ಗೆ ಕವಾಟ ಉದ್ಘಾಟನೆ, ಅಭಿಷೇಕ, ಪ್ರಸನ್ನಪೂಜೆ, ಮೂಲಸ್ಥಾನ ಗುಂಡದಿಂದ ಭಂಡಾರದ ಆಗಮನ, ಮಹಾಪೂಜೆ ಹಾಗೂ ಶ್ರೀಮತಿ ಸುಕನ್ಯಾ ದಿನೇಶ್ ಮತ್ತು ಬಳಗದಿಂದ ಸಂಗೀತ ಕಛೇರಿ, ಶ್ರೀ ಪಂಚದುರ್ಗಾ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ, ಕೊಲ್ಯೂರು ಭಾಸ್ಕರ ಮತ್ತು ಬಳಗದಿಂದ ವಿಶೇಷ ಚೆಂಡೆ ಸೇವೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಬೆಳ್ತಂಗಡಿ ‘ಶೆಟ್ಟಿ ಆರ್ಟ್ಸ್’ ಗಿರಿಧರ ಶೆಟ್ಟಿ ಬಳಗದವರಿಂದ ವಿನೂತನ ಶೈಲಿಯ ನೃತ್ಯ, ಶ್ರೀ ಪಂಚದುರ್ಗಾಪರಮೇಶ್ವರಿ ಗೆಳೆಯರ ಬಳಗ ಕೊಯ್ಯೂರು ಇವರಿಂದ ಚೇತನ್ ವರ್ಕಾಡಿ ವಿರಚಿತ “ಏರಾದುಪ್ಪು” ತುಳು ಹಾಸ್ಯ ಸಾಂಸಾರಿಕ ನಾಟಕ, ರಾತ್ರಿ 9ರಿಂದ ಧರ್ಮದೈವಗಳ ನೇಮೋತ್ಸವ, ಶ್ರೀ ದೇವರ ಉತ್ಸವ, ಶ್ರೀ ಉಳ್ಳಾಲ್ತಿ ನೇಮೋತ್ಸವ, ಮಹಾಪೂಜೆ ನಡೆಯಲಿದೆ.ಮಾ.19ರಂದು ಬೆಳಿಗ್ಗೆ ವೈದಿಕ ವಿಧಿವಿಧಾನಗಳು ಜರುಗಲಿದೆ.

ಮಾ.25 ರಂದು ಜಾತ್ರಾ ಪ್ರಯುಕ್ತ ಸಂಜೆ 6:30ರಿಂದ ಬಪ್ಪನಾಡು ಮೇಳದವರಿಂದ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಜರುಗಲಿದೆ.

Related posts

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!