23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಾ.18: ಉಜಿರೆಗೆ ನಂದಿ ರಥಯಾತ್ರೆ

ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ 5 ಕ್ಕೆ  ಉಜಿರೆಗೆ ಪ್ರವೇಶಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಂಜೆ 5.30ಕ್ಕೆ ಉಜಿರೆ ಬೆಳಾಲ್ ಕ್ರಾಸ್‌ನಿಂದ ಭವ್ಯ ರಥಯಾತ್ರೆ, ನಂದಿ ರಥಯಾತ್ರೆಗೆ ಬೆಳ್ತಂಗಡಿ ದೇಸೀ ಗೋಸಂರಕ್ಷಕ ರಮೇಶ್ ಎಸ್. ಚಾಲನೆ ನೀಡಲಿದ್ದಾರೆ. ನಂತರ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಸಂಜೆ ಗಂಟೆ 6-30ರಿಂದ ಉಜಿರೆ ಶಾರದಾ ಮಂಟಪದಲ್ಲಿ ಸಭಾ ಕಾರ್ಯಕ್ರಮ, ಸಭಾಧ್ಯಕ್ಷತೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತಸರರು ಶರತ್‌ಕೃಷ್ಣ ಪಡ್ಡೆಟ್ನಾಯ ವಹಿಸಲಿದ್ದಾರೆ. ನಂದಿ ರಥಯಾತ್ರೆ ರಾಧಾ ಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಅಧ್ಯಕ್ಷ ಭಕ್ತಿ ಭೂಷಣ್ ದಾಸ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ.

ಕಳೆಂಜ ಸ್ವಾಮಿಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನಂದಗೋಕುಲ, ಅಧ್ಯಕ್ಷ ಡಾ| ಎಂ.ಎಂ. ದಯಾಕರ್ ಉಪಸ್ಥಿತರಿರುವರು.

ನಂದಿ ರಥಯಾತ್ರೆ ಗುರಿ: ಒಂದು ಕೋಟಿ ಗೋಮಯ ಹಣತೆ, 1,11,108 ವಿಷ್ಣು ಸಹಸ್ರನಾಮ ಪಾರಾಯಣ, 108 ಸ್ಥಾನಗಳಲ್ಲಿ ಗವ್ಯ ಉತ್ಪನ್ನ ಮಾರಾಟ ಕೇಂದ್ರ ಉದ್ಘಾಟನೆ, ಆರೋಗ್ಯಯುತ, ಸ್ವಾವಲಂಬಿ, ಸುಸಂಪನ್ನ, ಸಮೃದ್ಧ, ವಿಶ್ವಗುರು ಭಾರತ. ನಂದಿಯಿಂದ ಫಲವತ್ತಾದ ಮಣ್ಣು, ಶುದ್ಧ ನೀರು & ಗಾಳಿ, ಪರಿಸರ ಸಂರಕ್ಷಣೆ.

Related posts

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya
error: Content is protected !!