September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಾ.18: ಉಜಿರೆಗೆ ನಂದಿ ರಥಯಾತ್ರೆ

ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ 5 ಕ್ಕೆ  ಉಜಿರೆಗೆ ಪ್ರವೇಶಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಂಜೆ 5.30ಕ್ಕೆ ಉಜಿರೆ ಬೆಳಾಲ್ ಕ್ರಾಸ್‌ನಿಂದ ಭವ್ಯ ರಥಯಾತ್ರೆ, ನಂದಿ ರಥಯಾತ್ರೆಗೆ ಬೆಳ್ತಂಗಡಿ ದೇಸೀ ಗೋಸಂರಕ್ಷಕ ರಮೇಶ್ ಎಸ್. ಚಾಲನೆ ನೀಡಲಿದ್ದಾರೆ. ನಂತರ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಸಂಜೆ ಗಂಟೆ 6-30ರಿಂದ ಉಜಿರೆ ಶಾರದಾ ಮಂಟಪದಲ್ಲಿ ಸಭಾ ಕಾರ್ಯಕ್ರಮ, ಸಭಾಧ್ಯಕ್ಷತೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತಸರರು ಶರತ್‌ಕೃಷ್ಣ ಪಡ್ಡೆಟ್ನಾಯ ವಹಿಸಲಿದ್ದಾರೆ. ನಂದಿ ರಥಯಾತ್ರೆ ರಾಧಾ ಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಅಧ್ಯಕ್ಷ ಭಕ್ತಿ ಭೂಷಣ್ ದಾಸ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ.

ಕಳೆಂಜ ಸ್ವಾಮಿಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನಂದಗೋಕುಲ, ಅಧ್ಯಕ್ಷ ಡಾ| ಎಂ.ಎಂ. ದಯಾಕರ್ ಉಪಸ್ಥಿತರಿರುವರು.

ನಂದಿ ರಥಯಾತ್ರೆ ಗುರಿ: ಒಂದು ಕೋಟಿ ಗೋಮಯ ಹಣತೆ, 1,11,108 ವಿಷ್ಣು ಸಹಸ್ರನಾಮ ಪಾರಾಯಣ, 108 ಸ್ಥಾನಗಳಲ್ಲಿ ಗವ್ಯ ಉತ್ಪನ್ನ ಮಾರಾಟ ಕೇಂದ್ರ ಉದ್ಘಾಟನೆ, ಆರೋಗ್ಯಯುತ, ಸ್ವಾವಲಂಬಿ, ಸುಸಂಪನ್ನ, ಸಮೃದ್ಧ, ವಿಶ್ವಗುರು ಭಾರತ. ನಂದಿಯಿಂದ ಫಲವತ್ತಾದ ಮಣ್ಣು, ಶುದ್ಧ ನೀರು & ಗಾಳಿ, ಪರಿಸರ ಸಂರಕ್ಷಣೆ.

Related posts

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!