July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಾ.18: ಉಜಿರೆಗೆ ನಂದಿ ರಥಯಾತ್ರೆ

ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ 5 ಕ್ಕೆ  ಉಜಿರೆಗೆ ಪ್ರವೇಶಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಂಜೆ 5.30ಕ್ಕೆ ಉಜಿರೆ ಬೆಳಾಲ್ ಕ್ರಾಸ್‌ನಿಂದ ಭವ್ಯ ರಥಯಾತ್ರೆ, ನಂದಿ ರಥಯಾತ್ರೆಗೆ ಬೆಳ್ತಂಗಡಿ ದೇಸೀ ಗೋಸಂರಕ್ಷಕ ರಮೇಶ್ ಎಸ್. ಚಾಲನೆ ನೀಡಲಿದ್ದಾರೆ. ನಂತರ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಸಂಜೆ ಗಂಟೆ 6-30ರಿಂದ ಉಜಿರೆ ಶಾರದಾ ಮಂಟಪದಲ್ಲಿ ಸಭಾ ಕಾರ್ಯಕ್ರಮ, ಸಭಾಧ್ಯಕ್ಷತೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತಸರರು ಶರತ್‌ಕೃಷ್ಣ ಪಡ್ಡೆಟ್ನಾಯ ವಹಿಸಲಿದ್ದಾರೆ. ನಂದಿ ರಥಯಾತ್ರೆ ರಾಧಾ ಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಅಧ್ಯಕ್ಷ ಭಕ್ತಿ ಭೂಷಣ್ ದಾಸ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ.

ಕಳೆಂಜ ಸ್ವಾಮಿಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನಂದಗೋಕುಲ, ಅಧ್ಯಕ್ಷ ಡಾ| ಎಂ.ಎಂ. ದಯಾಕರ್ ಉಪಸ್ಥಿತರಿರುವರು.

ನಂದಿ ರಥಯಾತ್ರೆ ಗುರಿ: ಒಂದು ಕೋಟಿ ಗೋಮಯ ಹಣತೆ, 1,11,108 ವಿಷ್ಣು ಸಹಸ್ರನಾಮ ಪಾರಾಯಣ, 108 ಸ್ಥಾನಗಳಲ್ಲಿ ಗವ್ಯ ಉತ್ಪನ್ನ ಮಾರಾಟ ಕೇಂದ್ರ ಉದ್ಘಾಟನೆ, ಆರೋಗ್ಯಯುತ, ಸ್ವಾವಲಂಬಿ, ಸುಸಂಪನ್ನ, ಸಮೃದ್ಧ, ವಿಶ್ವಗುರು ಭಾರತ. ನಂದಿಯಿಂದ ಫಲವತ್ತಾದ ಮಣ್ಣು, ಶುದ್ಧ ನೀರು & ಗಾಳಿ, ಪರಿಸರ ಸಂರಕ್ಷಣೆ.

Related posts

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಬೆಳಗೋಣ ಸಂಸ್ಕಾರ ದೀಪ ಕಾರ್ಯಕ್ರಮ

Suddi Udaya
error: Content is protected !!