22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಾ.18: ಉಜಿರೆಗೆ ನಂದಿ ರಥಯಾತ್ರೆ

ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ 5 ಕ್ಕೆ  ಉಜಿರೆಗೆ ಪ್ರವೇಶಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಂಜೆ 5.30ಕ್ಕೆ ಉಜಿರೆ ಬೆಳಾಲ್ ಕ್ರಾಸ್‌ನಿಂದ ಭವ್ಯ ರಥಯಾತ್ರೆ, ನಂದಿ ರಥಯಾತ್ರೆಗೆ ಬೆಳ್ತಂಗಡಿ ದೇಸೀ ಗೋಸಂರಕ್ಷಕ ರಮೇಶ್ ಎಸ್. ಚಾಲನೆ ನೀಡಲಿದ್ದಾರೆ. ನಂತರ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಸಂಜೆ ಗಂಟೆ 6-30ರಿಂದ ಉಜಿರೆ ಶಾರದಾ ಮಂಟಪದಲ್ಲಿ ಸಭಾ ಕಾರ್ಯಕ್ರಮ, ಸಭಾಧ್ಯಕ್ಷತೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತಸರರು ಶರತ್‌ಕೃಷ್ಣ ಪಡ್ಡೆಟ್ನಾಯ ವಹಿಸಲಿದ್ದಾರೆ. ನಂದಿ ರಥಯಾತ್ರೆ ರಾಧಾ ಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಅಧ್ಯಕ್ಷ ಭಕ್ತಿ ಭೂಷಣ್ ದಾಸ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ.

ಕಳೆಂಜ ಸ್ವಾಮಿಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನಂದಗೋಕುಲ, ಅಧ್ಯಕ್ಷ ಡಾ| ಎಂ.ಎಂ. ದಯಾಕರ್ ಉಪಸ್ಥಿತರಿರುವರು.

ನಂದಿ ರಥಯಾತ್ರೆ ಗುರಿ: ಒಂದು ಕೋಟಿ ಗೋಮಯ ಹಣತೆ, 1,11,108 ವಿಷ್ಣು ಸಹಸ್ರನಾಮ ಪಾರಾಯಣ, 108 ಸ್ಥಾನಗಳಲ್ಲಿ ಗವ್ಯ ಉತ್ಪನ್ನ ಮಾರಾಟ ಕೇಂದ್ರ ಉದ್ಘಾಟನೆ, ಆರೋಗ್ಯಯುತ, ಸ್ವಾವಲಂಬಿ, ಸುಸಂಪನ್ನ, ಸಮೃದ್ಧ, ವಿಶ್ವಗುರು ಭಾರತ. ನಂದಿಯಿಂದ ಫಲವತ್ತಾದ ಮಣ್ಣು, ಶುದ್ಧ ನೀರು & ಗಾಳಿ, ಪರಿಸರ ಸಂರಕ್ಷಣೆ.

Related posts

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಲಾಯಿಲ: ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya
error: Content is protected !!