24.5 C
ಪುತ್ತೂರು, ಬೆಳ್ತಂಗಡಿ
June 16, 2025
Uncategorized

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಕಣಿಯೂರು: ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಕಣಿಯೂರು ಇದರ ವಾರ್ಷಿಕ ಮಹಾಸಭೆ ಮಾ.11 ರಂದು ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಗೀತಾ ವಹಿಸಿದ್ದರು. ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಜೀವಿನಿ ಸಂಘದ ಸದಸ್ಯೆ ಶೀಲರವರು ಪ್ರಾರ್ಥನೆಯನ್ನು ಮಾಡಿದರು.ಎಂ. ಬಿಕೆ ರತ್ನಾವತಿ ಒಕ್ಕೂಟದ ವಾರ್ಷಿಕ ವರದಿ ಹಾಗೂ ಒಕ್ಕೂಟದ ಜಮಾ & ಖರ್ಚು ಮಂಡಿಸಿ ಅನುಮೋದಯನ್ನು ಪಡೆದರು.

ವಲಯ ಮೇಲ್ವಿಚಾರಕರಾದ ವೀಣಾಶ್ರಿ ಸಂಜೀವಿನಿ ಯೋಜನೆಯ ಧ್ಯೇಯೋದ್ಧೇಶಗಳ ಬಗ್ಗೆ ಜೀವನೋಪಾಯ ಚಟುವಟಿಕೆ, ವಾರ್ಡ್ ಒಕ್ಕೂಟದ ರಚನೆ ಬಗ್ಗೆ ಹಾಗೂ ಒಕ್ಕೂಟದಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಇತರ ಹಲವಾರು ವಿಷಯಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಮಾಹಿತಿಯನ್ನು ಸದಸ್ಯರಿಗೆ ನೀಡಿದರು. ಉಷಾ ಕಾಮತ್ ಸರ್ಕಾರ ನೀಡುವ ವಿಮಾ ಸೌಲಭ್ಯಗಳ ಬಗ್ಗೆ ಇತರ ಬ್ಯಾಂಕಿನ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದರು. ಸಂಘದ ಸದಸ್ಯರಿಗೆ ಕೆಲವೊಂದು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಅತೀ ಹೆಚ್ಚು ಸಾಲ ಪಡೆದ ಸಂಘವನ್ನು ಗುರುತಿಸಿ ಸ್ಮರಣಿಕೆ ನೀಡಲಾಯಿತು. ಒಕ್ಕೂಟಕ್ಕೆ ನೂತನವಾಗಿ ಆಯ್ಕೆಗೊಂಡ ಸದಸ್ಯರುಗಳನ್ನು ಪರಿಚಯದೊಂದಿಗೆ, ನಿರ್ಗಮಿತ ಸದಸ್ಯರುಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು ಜೊತೆಗೆ ನೂತನ ಸಮಿತಿಗೆ ಪುಷ್ಟ ಗುಚ್ಛದೊಂದಿಗೆ ದಾಖಲಾತಿಗಳನ್ನು ಸಲ್ಲಿಸುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಲಾಯಿತು ಪಂಚಾಯತ್ ಅಧ್ಯಕ್ಷರು ಸ್ವಚ್ಛ ತೆಯ ಬಗ್ಗೆ ಒಕ್ಕೂಟದ ಬಗ್ಗೆ ಮೆಚ್ಚುಗೆ ತಿಳಿಸಿದರು. ನಿರ್ಗಮಿತ ಅಧ್ಯಕ್ಷರು ಅನಿಸಿಕೆಯನ್ನು ಹಂಚಿಕೊಂಡರು ಸಂಘದ ಸದಸ್ಯರು ತಯಾರಿಸಿದ ಪಿನಾಯಿಲನ್ನು ಬಿಡುಗಡೆ ಮಾಡಲಾಯಿತು. ಕೃಷಿ ಸಖಿ ಕಾರ್ಯಕ್ರಮ ನಿರೂಪಣೆ ಮಾಡಿದರು.ಎಲ್.ಸಿ ಆರ್ ಪಿ ಸ್ವಾಗತಿಸಿದರು. ಸ್ವಚ್ಛ ವಾಹನದ ಡ್ರೈವರ್ ಶ್ವೇತ ರವರು ಧನ್ಯವಾದವಿತ್ತರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya
error: Content is protected !!