25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಕಣಿಯೂರು: ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಕಣಿಯೂರು ಇದರ ವಾರ್ಷಿಕ ಮಹಾಸಭೆ ಮಾ.11 ರಂದು ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಗೀತಾ ವಹಿಸಿದ್ದರು. ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಜೀವಿನಿ ಸಂಘದ ಸದಸ್ಯೆ ಶೀಲರವರು ಪ್ರಾರ್ಥನೆಯನ್ನು ಮಾಡಿದರು.ಎಂ. ಬಿಕೆ ರತ್ನಾವತಿ ಒಕ್ಕೂಟದ ವಾರ್ಷಿಕ ವರದಿ ಹಾಗೂ ಒಕ್ಕೂಟದ ಜಮಾ & ಖರ್ಚು ಮಂಡಿಸಿ ಅನುಮೋದಯನ್ನು ಪಡೆದರು.

ವಲಯ ಮೇಲ್ವಿಚಾರಕರಾದ ವೀಣಾಶ್ರಿ ಸಂಜೀವಿನಿ ಯೋಜನೆಯ ಧ್ಯೇಯೋದ್ಧೇಶಗಳ ಬಗ್ಗೆ ಜೀವನೋಪಾಯ ಚಟುವಟಿಕೆ, ವಾರ್ಡ್ ಒಕ್ಕೂಟದ ರಚನೆ ಬಗ್ಗೆ ಹಾಗೂ ಒಕ್ಕೂಟದಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಇತರ ಹಲವಾರು ವಿಷಯಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಮಾಹಿತಿಯನ್ನು ಸದಸ್ಯರಿಗೆ ನೀಡಿದರು. ಉಷಾ ಕಾಮತ್ ಸರ್ಕಾರ ನೀಡುವ ವಿಮಾ ಸೌಲಭ್ಯಗಳ ಬಗ್ಗೆ ಇತರ ಬ್ಯಾಂಕಿನ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದರು. ಸಂಘದ ಸದಸ್ಯರಿಗೆ ಕೆಲವೊಂದು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಅತೀ ಹೆಚ್ಚು ಸಾಲ ಪಡೆದ ಸಂಘವನ್ನು ಗುರುತಿಸಿ ಸ್ಮರಣಿಕೆ ನೀಡಲಾಯಿತು. ಒಕ್ಕೂಟಕ್ಕೆ ನೂತನವಾಗಿ ಆಯ್ಕೆಗೊಂಡ ಸದಸ್ಯರುಗಳನ್ನು ಪರಿಚಯದೊಂದಿಗೆ, ನಿರ್ಗಮಿತ ಸದಸ್ಯರುಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು ಜೊತೆಗೆ ನೂತನ ಸಮಿತಿಗೆ ಪುಷ್ಟ ಗುಚ್ಛದೊಂದಿಗೆ ದಾಖಲಾತಿಗಳನ್ನು ಸಲ್ಲಿಸುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಲಾಯಿತು ಪಂಚಾಯತ್ ಅಧ್ಯಕ್ಷರು ಸ್ವಚ್ಛ ತೆಯ ಬಗ್ಗೆ ಒಕ್ಕೂಟದ ಬಗ್ಗೆ ಮೆಚ್ಚುಗೆ ತಿಳಿಸಿದರು. ನಿರ್ಗಮಿತ ಅಧ್ಯಕ್ಷರು ಅನಿಸಿಕೆಯನ್ನು ಹಂಚಿಕೊಂಡರು ಸಂಘದ ಸದಸ್ಯರು ತಯಾರಿಸಿದ ಪಿನಾಯಿಲನ್ನು ಬಿಡುಗಡೆ ಮಾಡಲಾಯಿತು. ಕೃಷಿ ಸಖಿ ಕಾರ್ಯಕ್ರಮ ನಿರೂಪಣೆ ಮಾಡಿದರು.ಎಲ್.ಸಿ ಆರ್ ಪಿ ಸ್ವಾಗತಿಸಿದರು. ಸ್ವಚ್ಛ ವಾಹನದ ಡ್ರೈವರ್ ಶ್ವೇತ ರವರು ಧನ್ಯವಾದವಿತ್ತರು.

Related posts

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya
error: Content is protected !!