25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಆಯೋಜಿಸಲಾದ 3ನೇ ವರ್ಷದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಸಂಘದ ಕಚೇರಿಯಲ್ಲಿ ವಿಜೃಂಭಣೆಯಿಂದ ನೆರವೇರಿತು.

ಸಂಘದ ಪ್ರಮುಖ ಸದಸ್ಯರು ಈ ಸಂದರ್ಭದಲ್ಲಿ ಭಾಗವಹಿಸಿ, ಈ ವರ್ಷದ ಕ್ರೀಡಾಕೂಟದ ವೈಶಿಷ್ಟ್ಯಗಳನ್ನು ಹಂಚಿಕೊಂಡರು.ಈ ಬಾರಿ ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಪುರುಷ ಮತ್ತು ಮಹಿಳಾ ವಿಭಾಗಗಳ ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಏಪ್ರಿಲ್ 20, 2025, ಶನಿವಾರ, ಸಂಜೆ 5:00 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ, ಕಾಯತ್ತಡ್ಕ, ಕಳಂಜದಲ್ಲಿ ಈ ಕ್ರೀಡಾ ಹಬ್ಬ ಅದ್ಧೂರಿಯಾಗಿ ನಡೆಯಲಿದೆ.

ವಿಶೇಷ ಆಕರ್ಷಣೆ: ಈ ಸಂದರ್ಭದಲ್ಲಿ ಗ್ರಾಮದ ಡಾಕ್ಟರೇಟ್ ಪದವಿಯನ್ನು ಪಡೆದವರನ್ನು, ಕ್ರೀಡಾ ಕ್ಷೇತ್ರದಲ್ಲಿ ಶ್ರೇಷ್ಠ ಸಾಧನೆ ಮಾಡಿದವರನ್ನು ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡ ನಡೆಯಲಿದೆ.

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಮಾಜ ಸೇವೆ, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಂಘದ ಒಗ್ಗಟ್ಟನ್ನು ಬಲಪಡಿಸುವ ಗುರಿ ಹೊಂದಿದ್ದು, ಈ ಕ್ರೀಡಾಕೂಟವು ಯುವ ಕ್ರೀಡಾಪಟುಗಳಿಗೆ ಮಹತ್ವದ ವೇದಿಕೆ ಒದಗಿಸುತ್ತದೆ. ಎಲ್ಲಾ ಕ್ರೀಡಾಪ್ರೇಮಿಗಳು ಮತ್ತು ಸ್ಪರ್ಧಿಗಳು ಈ ಕ್ರೀಡಾ ಹಬ್ಬದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ.

Related posts

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya
error: Content is protected !!