September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

ಮರೋಡಿ: ನಿನ್ನೆ ಸುರಿದ ಸಿಡಿಲು ಸಹಿತ ಭಾರಿ ಗಾಳಿ ಮಳೆಗೆ ಬೃಹತ್‌ ಗಾತ್ರದ ಮರವೊಂದು ಮನೆ ಮೇಲೆ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಮರೋಡಿಯಲ್ಲಿ ನಡೆದಿದೆ.

ನಿನ್ನೆ ಸಂಜೆ ಸಮಯಕ್ಕೆ ತಾಲೂಕಿನಾದ್ಯಂತ ಗಾಳಿ ಮಳೆಯಾಗಿದೆ. ಮರೋಡಿಯಲ್ಲಿಯೂ ಮಳೆಯ ಪ್ರಮಾಣ ಜೋರಾಗಿತ್ತು. ಸಂಜೆ 6.30ಕ್ಕೆ ಸುರಿದ ಜೋರಾದ ಮಳೆಗೆ ಬೃಹತ್‌ ಗಾತ್ರದ ಮರ ಬುಡ ಸಮೇತ ಸಂತೋಷ್ ದೇವಾಡಿಗರವರ ಮನೆಯ ಮೇಲೆ ಉರುಳಿ ಬಿದ್ದಿದೆ. ಮನೆಯಲ್ಲಿ ಸಂತೋಷ ದೇವಾಡಿಗ ಅವರ ತಾಯಿ ಲಲಿತಾ, ತಮ್ಮ ಸಂದೀಪ್ ದೇವಾಡಿಗ, ತಮ್ಮನ ಪತ್ನಿ ರಜನಿ, ಸಣ್ಣ ಪ್ರಾಯದ ಮಗು ಮನೆಯೊಳಗೆ ಇದ್ದರು. ಜೋರಾದ ಶಬ್ದ ಬಂದಾಗ ಎಲ್ಲರೂ ಮನೆಯ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಯ ಹಂಚು, ಶೀಟ್, ಅಡುಗೆ ಪಾತ್ರೆ, ಟಿವಿ, ಕಿಟಕಿ, ದಾರಂದ, ವಿದ್ಯುತ್ ಉಪಕರಣಗಳು ಎಲ್ಲವೂ ಹಾನಿಗೊಳಗಾಗಿದೆ.ಲಕ್ಷಾಂತರ ರೂ ನಷ್ಟ ಸಂಭವಿಸಬಹುದೆಂದು ತಿಳಿದು ಬಂದಿದೆ.

ಮಾಹಿತಿ ತಿಳಿದ ತಕ್ಷಣ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಕಂದಾಯ ಇಲಾಖಾ ಅಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ಸ್ಥಳೀಯರಾದ ಸೂರಾಜ್ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

Related posts

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya
error: Content is protected !!