23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

ಮರೋಡಿ: ನಿನ್ನೆ ಸುರಿದ ಸಿಡಿಲು ಸಹಿತ ಭಾರಿ ಗಾಳಿ ಮಳೆಗೆ ಬೃಹತ್‌ ಗಾತ್ರದ ಮರವೊಂದು ಮನೆ ಮೇಲೆ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಮರೋಡಿಯಲ್ಲಿ ನಡೆದಿದೆ.

ನಿನ್ನೆ ಸಂಜೆ ಸಮಯಕ್ಕೆ ತಾಲೂಕಿನಾದ್ಯಂತ ಗಾಳಿ ಮಳೆಯಾಗಿದೆ. ಮರೋಡಿಯಲ್ಲಿಯೂ ಮಳೆಯ ಪ್ರಮಾಣ ಜೋರಾಗಿತ್ತು. ಸಂಜೆ 6.30ಕ್ಕೆ ಸುರಿದ ಜೋರಾದ ಮಳೆಗೆ ಬೃಹತ್‌ ಗಾತ್ರದ ಮರ ಬುಡ ಸಮೇತ ಸಂತೋಷ್ ದೇವಾಡಿಗರವರ ಮನೆಯ ಮೇಲೆ ಉರುಳಿ ಬಿದ್ದಿದೆ. ಮನೆಯಲ್ಲಿ ಸಂತೋಷ ದೇವಾಡಿಗ ಅವರ ತಾಯಿ ಲಲಿತಾ, ತಮ್ಮ ಸಂದೀಪ್ ದೇವಾಡಿಗ, ತಮ್ಮನ ಪತ್ನಿ ರಜನಿ, ಸಣ್ಣ ಪ್ರಾಯದ ಮಗು ಮನೆಯೊಳಗೆ ಇದ್ದರು. ಜೋರಾದ ಶಬ್ದ ಬಂದಾಗ ಎಲ್ಲರೂ ಮನೆಯ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಯ ಹಂಚು, ಶೀಟ್, ಅಡುಗೆ ಪಾತ್ರೆ, ಟಿವಿ, ಕಿಟಕಿ, ದಾರಂದ, ವಿದ್ಯುತ್ ಉಪಕರಣಗಳು ಎಲ್ಲವೂ ಹಾನಿಗೊಳಗಾಗಿದೆ.ಲಕ್ಷಾಂತರ ರೂ ನಷ್ಟ ಸಂಭವಿಸಬಹುದೆಂದು ತಿಳಿದು ಬಂದಿದೆ.

ಮಾಹಿತಿ ತಿಳಿದ ತಕ್ಷಣ ಮರೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಕಂದಾಯ ಇಲಾಖಾ ಅಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ಸ್ಥಳೀಯರಾದ ಸೂರಾಜ್ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

Related posts

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!