March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.೧೪ ರಿಂದ ಪ್ರಾರಂಭಗೊಂಡು ಮಾ.೧೯ರವರೆಗೆ ನಡೆಯಲಿದೆ.


ಮಾ.14 ರಂದು ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಗಂಟೆ 9.30ಕ್ಕೆ ಪಡ್ಡ್ಯೋಡಿಗುತ್ತಿನಲ್ಲಿ ಉಪಹಾರ ರಾತ್ರಿ ಗಂಟೆ 10.00 ಕ್ಕೆ ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿಯುವುದು, ಪಡ್ಡ್ಯಾರಬೆಟ್ಟಕ್ಕೆ ಆಗಮನ, ಧ್ವಜಾರೋಹಣ, ಬಲಿ, ಚೆಂಡು ನಡೆಯಲಿದೆ.
ಮಾ.15 ರಂದು ಭೂತಬಲಿ ಉತ್ಸವ, ಮಾ.16 ರಂದು ಅಂಬೋಡಿ, ಬಲಿ ಉತ್ಸವ, ಹೂವಿನ ಪೂಜೆ, ರಥಾರೋಹಣ, ಮಾ.17 ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ ಗಂಟೆ ೧೨ಕ್ಕೆ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ 1.30 ರಿಂದ 7.30 ರ ತನಕ ಮಹಾ ಅನ್ನಸಂತರ್ಪಣೆ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ, ಮಾ.18 ರಂದು ಧ್ವಜ ಅವರೋಹಣ, ಸಂಪ್ರೋಕ್ಷಣೆ ಪಡ್ಡ್ಯೋಡಿ ಗುತ್ತಿಗೆ ಭಂಡಾರ ಹಿಂದಿರುಗುವುದು. ಮಾ.19 ರಂದು ರಾತ್ರಿ ಗಂಟೆ 7.30 ರಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ. ರಾತ್ರಿ ಗಂಟೆ 8 ರಿಂದ ಜೀ ಕನ್ನಡ ಸರಿಗಮಪ ಖ್ಯಾತಿಯ ಕರ್ನಾಟಕದ ಹೆಸರಾಂತ ಕಲಾವಿದೆ ವಿದುಷಿ ಸಾಧ್ವಿನಿ ಕೊಪ್ಪ ಮತ್ತು ತಂಡದವರಿಂದ ಗಾನ ಸುರಭಿ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಅನುವಂಶೀಯ ಆಡಳಿತದಾರರು ಎ. ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿಯವರು ಪಡ್ಡ್ಯೋಡಿಗುತ್ತು ತಿಳಿಸಿದ್ದಾರೆ.
ಪ್ರತಿ ಸಂಕ್ರಮಣ ಮತ್ತು ಜಾತ್ರಾ ಸಮಯದ 5 ದಿನಗಳು ಅನ್ನಸಂತರ್ಪಣೆ ಸೇವೆ ನಡೆಯಲಿರುವುದು.

Related posts

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya
error: Content is protected !!