March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

ಕೊಯ್ಯೂರು: ಇಲ್ಲಿಯ ಇತಿಹಾಸಪ್ರಸಿದ್ದ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆಯು ಶ್ರೀ ವೇದಮೂರ್ತಿ ನಂದಕುಮಾರ ತಂತ್ರಿ ರವರ ನೇತೃತ್ವದಲ್ಲಿ ಮಾ.15 ರಿಂದ ಮಾ.19 ರವರೆಗೆ ವಿದ್ಯುಕ್ತವಾಗಿ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಕೆ.ಬಿ. ಹರಿಶ್ಚಂದ್ರ ಬಲ್ಲಾಳ್ ಕೊಯ್ಯೂರುಗುತ್ತು ತಿಳಿಸಿದ್ದಾರೆ.

ಮಾ.15ರಂದು ಬೆಳಿಗ್ಗೆ ವೈದಿಕ ವಿಧಿವಿಧಾನಗಳು, ರಾತ್ರಿ ಉತ್ಸವ, ಮಹಾಪೂಜೆ, ಬಲಿ. ಮಾ.16ರಂದು ಬೆಳಿಗ್ಗೆ ಉತ್ಸವ, ಕಲಶಾಭಿಷೇಕ, ಮಹಾಪೂಜೆ, ರಾತ್ರಿ ಉತ್ಸವ, ಪಡಿಯಕ್ಕಿ, ಮಹಾಪೂಜೆ, ಬಲಿ. ಮಾ.17ರಂದು ಬೆಳಿಗ್ಗೆ ದರ್ಶನ ಬಲಿ, ಕಲಶಾಭಿಷೇಕ, ಮಹಾಪೂಜೆ, ಚಂಡಿಕಾ ಹೋಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಕೊಟ್ಟಿಗೆ ಕೆಲಸ, ಮಹಾರಥೋತ್ಸವ ಮಹಾಪೂಜೆ, ಭೂತಬಲಿ, ಕವಾಟ ಬಂಧನ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಮಾರಿ ನಂದನ ಮಾಲೆಂಕಿ ರವರಿಂದ ಸಂಗೀತ ಕಚೇರಿ ನಡೆಯಲಿದೆ. ಕೊಯ್ಯೂರು ಸುಂದರ ದೇವಾಡಿಗ ಮತ್ತು ಬಳಗದಿಂದ ಚೆಂಡೆ ವಾದನ, ಉಮಾನಾಥ ದೇವಾಡಿಗ ಅಶ್ವಥಪುರ ಮತ್ತು ಬಳಗದಿಂದ ನಾದಸ್ವರ ವಾದನ ನಡೆಯಲಿದೆ.

ಮಾ.18ರಂದು ಬೆಳಿಗ್ಗೆ ಕವಾಟ ಉದ್ಘಾಟನೆ, ಅಭಿಷೇಕ, ಪ್ರಸನ್ನಪೂಜೆ, ಮೂಲಸ್ಥಾನ ಗುಂಡದಿಂದ ಭಂಡಾರದ ಆಗಮನ, ಮಹಾಪೂಜೆ ಹಾಗೂ ಶ್ರೀಮತಿ ಸುಕನ್ಯಾ ದಿನೇಶ್ ಮತ್ತು ಬಳಗದಿಂದ ಸಂಗೀತ ಕಛೇರಿ, ಶ್ರೀ ಪಂಚದುರ್ಗಾ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ, ಕೊಲ್ಯೂರು ಭಾಸ್ಕರ ಮತ್ತು ಬಳಗದಿಂದ ವಿಶೇಷ ಚೆಂಡೆ ಸೇವೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಬೆಳ್ತಂಗಡಿ ‘ಶೆಟ್ಟಿ ಆರ್ಟ್ಸ್’ ಗಿರಿಧರ ಶೆಟ್ಟಿ ಬಳಗದವರಿಂದ ವಿನೂತನ ಶೈಲಿಯ ನೃತ್ಯ, ಶ್ರೀ ಪಂಚದುರ್ಗಾಪರಮೇಶ್ವರಿ ಗೆಳೆಯರ ಬಳಗ ಕೊಯ್ಯೂರು ಇವರಿಂದ ಚೇತನ್ ವರ್ಕಾಡಿ ವಿರಚಿತ “ಏರಾದುಪ್ಪು” ತುಳು ಹಾಸ್ಯ ಸಾಂಸಾರಿಕ ನಾಟಕ, ರಾತ್ರಿ 9ರಿಂದ ಧರ್ಮದೈವಗಳ ನೇಮೋತ್ಸವ, ಶ್ರೀ ದೇವರ ಉತ್ಸವ, ಶ್ರೀ ಉಳ್ಳಾಲ್ತಿ ನೇಮೋತ್ಸವ, ಮಹಾಪೂಜೆ ನಡೆಯಲಿದೆ.ಮಾ.19ರಂದು ಬೆಳಿಗ್ಗೆ ವೈದಿಕ ವಿಧಿವಿಧಾನಗಳು ಜರುಗಲಿದೆ.

ಮಾ.25 ರಂದು ಜಾತ್ರಾ ಪ್ರಯುಕ್ತ ಸಂಜೆ 6:30ರಿಂದ ಬಪ್ಪನಾಡು ಮೇಳದವರಿಂದ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಜರುಗಲಿದೆ.

Related posts

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya
error: Content is protected !!