ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

ಕೊಯ್ಯೂರು: ಇಲ್ಲಿಯ ಇತಿಹಾಸಪ್ರಸಿದ್ದ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆಯು ಶ್ರೀ ವೇದಮೂರ್ತಿ ನಂದಕುಮಾರ ತಂತ್ರಿ ರವರ ನೇತೃತ್ವದಲ್ಲಿ ಮಾ.15 ರಿಂದ ಮಾ.19 ರವರೆಗೆ ವಿದ್ಯುಕ್ತವಾಗಿ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಕೆ.ಬಿ. ಹರಿಶ್ಚಂದ್ರ ಬಲ್ಲಾಳ್ ಕೊಯ್ಯೂರುಗುತ್ತು ತಿಳಿಸಿದ್ದಾರೆ.

ಮಾ.15ರಂದು ಬೆಳಿಗ್ಗೆ ವೈದಿಕ ವಿಧಿವಿಧಾನಗಳು, ರಾತ್ರಿ ಉತ್ಸವ, ಮಹಾಪೂಜೆ, ಬಲಿ. ಮಾ.16ರಂದು ಬೆಳಿಗ್ಗೆ ಉತ್ಸವ, ಕಲಶಾಭಿಷೇಕ, ಮಹಾಪೂಜೆ, ರಾತ್ರಿ ಉತ್ಸವ, ಪಡಿಯಕ್ಕಿ, ಮಹಾಪೂಜೆ, ಬಲಿ. ಮಾ.17ರಂದು ಬೆಳಿಗ್ಗೆ ದರ್ಶನ ಬಲಿ, ಕಲಶಾಭಿಷೇಕ, ಮಹಾಪೂಜೆ, ಚಂಡಿಕಾ ಹೋಮ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಕೊಟ್ಟಿಗೆ ಕೆಲಸ, ಮಹಾರಥೋತ್ಸವ ಮಹಾಪೂಜೆ, ಭೂತಬಲಿ, ಕವಾಟ ಬಂಧನ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಮಾರಿ ನಂದನ ಮಾಲೆಂಕಿ ರವರಿಂದ ಸಂಗೀತ ಕಚೇರಿ ನಡೆಯಲಿದೆ. ಕೊಯ್ಯೂರು ಸುಂದರ ದೇವಾಡಿಗ ಮತ್ತು ಬಳಗದಿಂದ ಚೆಂಡೆ ವಾದನ, ಉಮಾನಾಥ ದೇವಾಡಿಗ ಅಶ್ವಥಪುರ ಮತ್ತು ಬಳಗದಿಂದ ನಾದಸ್ವರ ವಾದನ ನಡೆಯಲಿದೆ.

ಮಾ.18ರಂದು ಬೆಳಿಗ್ಗೆ ಕವಾಟ ಉದ್ಘಾಟನೆ, ಅಭಿಷೇಕ, ಪ್ರಸನ್ನಪೂಜೆ, ಮೂಲಸ್ಥಾನ ಗುಂಡದಿಂದ ಭಂಡಾರದ ಆಗಮನ, ಮಹಾಪೂಜೆ ಹಾಗೂ ಶ್ರೀಮತಿ ಸುಕನ್ಯಾ ದಿನೇಶ್ ಮತ್ತು ಬಳಗದಿಂದ ಸಂಗೀತ ಕಛೇರಿ, ಶ್ರೀ ಪಂಚದುರ್ಗಾ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ, ಕೊಲ್ಯೂರು ಭಾಸ್ಕರ ಮತ್ತು ಬಳಗದಿಂದ ವಿಶೇಷ ಚೆಂಡೆ ಸೇವೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಬೆಳ್ತಂಗಡಿ ‘ಶೆಟ್ಟಿ ಆರ್ಟ್ಸ್’ ಗಿರಿಧರ ಶೆಟ್ಟಿ ಬಳಗದವರಿಂದ ವಿನೂತನ ಶೈಲಿಯ ನೃತ್ಯ, ಶ್ರೀ ಪಂಚದುರ್ಗಾಪರಮೇಶ್ವರಿ ಗೆಳೆಯರ ಬಳಗ ಕೊಯ್ಯೂರು ಇವರಿಂದ ಚೇತನ್ ವರ್ಕಾಡಿ ವಿರಚಿತ “ಏರಾದುಪ್ಪು” ತುಳು ಹಾಸ್ಯ ಸಾಂಸಾರಿಕ ನಾಟಕ, ರಾತ್ರಿ 9ರಿಂದ ಧರ್ಮದೈವಗಳ ನೇಮೋತ್ಸವ, ಶ್ರೀ ದೇವರ ಉತ್ಸವ, ಶ್ರೀ ಉಳ್ಳಾಲ್ತಿ ನೇಮೋತ್ಸವ, ಮಹಾಪೂಜೆ ನಡೆಯಲಿದೆ.ಮಾ.19ರಂದು ಬೆಳಿಗ್ಗೆ ವೈದಿಕ ವಿಧಿವಿಧಾನಗಳು ಜರುಗಲಿದೆ.

ಮಾ.25 ರಂದು ಜಾತ್ರಾ ಪ್ರಯುಕ್ತ ಸಂಜೆ 6:30ರಿಂದ ಬಪ್ಪನಾಡು ಮೇಳದವರಿಂದ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಜರುಗಲಿದೆ.

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya
error: Content is protected !!