24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

ಉರುವಾಲು: ಗೋಕರ್ಣ ಮಂಡಲಾಧೀಶ್ವರ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಸಂಕಲ್ಪದಂತೆ ಅದ್ವೈತ ರಥ ಯಾತ್ರೆ – ಶ್ರೀ ಮಹಾ ಪಾದುಕಾ ಸಂಚಾರ ಗೋಕರ್ಣ ಮಂಡಲಾದ್ಯಂತ ಸಂಚರಿಸುತ್ತಿದ್ದು, ಉರುವಾಲಿನಲ್ಲಿರುವ ಶ್ರೀ ಭಾರತೀ ವಿದ್ಯಾ ಸಂಸ್ಥೆಗೆ ಆಗಮಿಸಿತು.

ವಿದ್ಯಾರ್ಥಿಗಳ ಬ್ಯಾಂಡ್ ವಾದ್ಯ ಜೊತೆಯಲ್ಲಿ ಮಾತೆಯರ ಹಾಗೂ ವಿದ್ಯಾರ್ಥಿನಿಯರ ಪೂರ್ಣ ಕುಂಭದೊಂದಿಗೆ ಅದ್ವೈತ ರಥ ವನ್ನು ಸ್ವಾಗತಿಸಲಾಯಿತು.

ಈಶ್ವರ ಪ್ರಸನ್ನ ಪರ್ನೆಕೋಡಿ , ಅಧ್ಯಕ್ಷರು ಉಪ್ಪಿನಂಗಡಿ ಮಂಡಲ ಇವರು ಪ್ರಾಸ್ತಾವಿಕ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಆಗಮಿಸಿದ ಪದ್ಮುಂಜ ಪ.ಪೂ. ಕಾಲೇಜು ನಿವೃತ್ತ ಪ್ರಾಂಶುಪಾಲರು ಮಹಾಲಿಂಗೇಶ್ವರ ಭಟ್ ಶಂಕರಾಚಾರ್ಯರ ಕುರಿತಾಗಿ ಸಾಕಷ್ಟು ಮಾಹಿತಿಗಳನ್ನು ನೀಡಿದರು.

ವಿಶೇಷ ಅತಿಥಿಗಳಿಗೆ ಶಾಲಾ ವತಿಯಿಂದ ಸ್ಮರಣಿಕೆ ನೀಡಲಾಯಿತು. ಶಾಲಾ ಸೇವಾ ಸಮಿತಿಯ ಮಾಜಿ ಅಧ್ಯಕ್ಷ ದಿವಾಕರ ಶಾಸ್ತ್ರೀ ಸ್ವಾಗತಿಸಿದರು .ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸೇವಾ ಸಮಿತಿಯ ಸದಸ್ಯ ಸತ್ಯ ಶಂಕರ ಭಟ್ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಸರ್ವ ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಸರ್ವ ಸದಸ್ಯರು, ಪೋಷಕರು, ಹಿತೈಷಿಗಳು , ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಪಾತ್ರರಾದರು.

Related posts

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!