23.4 C
ಪುತ್ತೂರು, ಬೆಳ್ತಂಗಡಿ
March 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ ಮಾ.13 ಮತ್ತು ಮಾ.14ರಂದು ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಮಾ.13 ರಂದು ಬೆಳಗ್ಗೆ ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ನಾಗದೇವರಿಗೆ ಆಶ್ಲೇಷಾಬಲಿ, ತಂಬಿಲ, ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು. ಸಂಜೆ ಉಡುಪಿಯ ಶೀರೂರು ವಾಮನತೀರ್ಥ ಸಂಸ್ಥಾನದ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಕಲ್ಲಡ್ಕ ವಿಠಲ್ ನಾಯಕ್ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ, ದುರ್ಗಾಪೂಜೆ, ರಂಗ ಪೂಜೆ, ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ ನಡೆಯಿತು.

ಇಂದು (ಮಾ.14) ಬೆಳಗ್ಗೆ ಗಣಪತಿಹೋಮ, ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರ ದರ್ಶನಬಲಿ ಹಾಗೂ ಬಟ್ಟಲು ಕಾಣಿಕೆ, ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವಾಧ್ಯಕ್ಷರು, ಅರ್ಚಕರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭರತ್ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು , ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಸಂಜೆ ಕ್ಷೇತ್ರದ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Related posts

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!