July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಇದರ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರು ದಿ| ಪದ್ಮನಾಭ ಎನ್. ಮಾಣಿಂಜ ಇವರ ಸಂಘಕ್ಕೆ ನೀಡಿದ ಮಾರ್ಗದರ್ಶಕ ಸೇವೆಯನ್ನು ಸ್ಮರಿಸಿ ನುಡಿನಮನ ಕಾರ್ಯಕ್ರಮ ಸಂಘದ ದಿ| ಜಿ.ಎನ್. ಭಿಡೆ ಸಭಾಭವನದಲ್ಲಿ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಜಿ ಭಿಡೆ ಯವರು ಮಾತನಾಡಿ ಮಿತಭಾಷಿಯಾಗಿದ್ದ ಶ್ರೀಯುತರು ಸರಕಾರಿ ಉನ್ನತ ಸೇವೆಯ ಅನುಭವವನ್ನು ಸಂಘಕ್ಕೆ ಅನೇಕ ಅವಧಿಗೆ ಉಪಾಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ನೀಡಿದ್ದರು ಹಾಗೂ ಸಮಾಜದಲ್ಲಿ ಉನ್ನತ ಗೌರವಕ್ಕೆ ಪಾತ್ರರಾಗಿದ್ದರು ಎಂದು ನೆನಪಿಸಿಕೊಂಡರು. ಉಪಾಧ್ಯಕ್ಷ ಎಂ. ಅನಂತ ಭಟ್ ಇವರು ಶ್ರೀಯುತರ ಕಾರ್ಯಸಾಧನೆಯಲ್ಲಿನ ಧೀಮಂತಿಕೆಯನ್ನು ಮತ್ತು ಒಡನಾಟ ನೆನಪಿಸಿಕೊಂಡು ಗೌರವ ಸಮರ್ಪಿಸಿದರು.

ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿಯವರು ಕಾರ್ಯಕ್ರಮ ನಿರ್ವಹಿಸಿ ಸಂಘದಲ್ಲಿ ಆರಂಭ ದಿನಗಳಲ್ಲೇ ಸದಸ್ಯರಾಗಿದ್ದ ದಿ| ಪದ್ಮನಾಭ ಎನ್. ಮಾಣಿಂಜ ರವರು ಸಂಘದಲ್ಲಿ 2005 ರಿಂದ 2020 ರ ಅವಧಿಗೆ ಉಪಾಧ್ಯಕ್ಷರಾಗಿ ಹಾಗೂ 1996 ರಿಂದ ಈವರೆಗೂ ಆಡಳಿತ ಮಂಡಳಿಯಲ್ಲಿ ನಿರ್ದೇಶಕರಾಗಿ ಸಂಘದ ಬೆಳವಣಿಗೆಯಲ್ಲಿ ದೊಡ್ಡ ಪಾತ್ರವಹಿಸಿದವರು ಎಂದು ನೆನೆದು ನುಡಿನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಶ್ರೀಮತಿ ಜಯಶ್ರೀ ಡಿ.ಎಂ., ಗ್ರೇಸಿಯನ್ ವೇಗಸ್, ಸೋಮನಾಥ ಬಂಗೇರ, ಕೆ.ಜೆ. ಅಗಸ್ಟಿನ್, ವಿ.ವಿ. ಅಬ್ರಾಹಂ, ಬಾಲಕೃಷ್ಣ ಗೌಡ ಕೆ., ಅಬ್ರಾಹಂ ಬಿ.ಎಸ್., ಶಶಿಧರ ಡೋಂಗ್ರೆ, ರಾಮ ನಾಯ್ಕ, ಬೈರಪ್ಪ, ಶ್ರೀಮತಿ ಆರ್. ಸುಭಾಷಿಣಿ ಹಾಗೂ ಸಂಘದ ಸಿಬ್ಬಂದಿ ವರ್ಗ ಭಾಗವಹಿಸಿ ಭಾವಚಿತ್ರಕ್ಕೆ ಗೌರವ ಸಮರ್ಪಿಸಿದರು.

Related posts

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya
error: Content is protected !!