25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

ಮಂಗಳೂರು: ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಯಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ ‘ಟೆಕ್ ಯುವ – 25’ ಮಾ.12 ರಂದು ಉದ್ಘಾಟನೆಗೊಂಡಿತು.

ಬೆಂಗಳೂರಿನ ಐಸ್ಪಿ ಆಕ್ರೋ ರೋಬೋಟಿಕ್ಸ್ ಹಾಗೂ ಮಂಗಳೂರಿನ ಅಗ್ರಿಲೀಫ್ ಪೈವೇಟ್ ಲಿಮಿಟೆಡ್ ಸಂಸ್ಥೆ ಮುಖ್ಯಸ್ಥ, ಸಿಇಒ ಅವಿನಾಶ್ ರಾವ್, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಿಮ್ಮ ಸುತ್ತಮುತ್ತಲಿರುವ ಜನರೊಂದಿಗೆ ಸಂವಹನ ನಡೆಸಿ, ಅವರ ಜೀವನ ಅನುಭವಗಳಿಂದ ಪ್ರೇರಿತರಾಗಿರಿ. ಉತ್ತಮ ನಾಯಕನಾಗಲು ತಂಡದೊಂದಿಗೆ ಕೆಲಸ ಮಾಡುವುದು ಅಗತ್ಯ. ಉತ್ತಮ ಸಂವಹನವು ವ್ಯವಹಾರ ಅಭಿವೃದ್ಧಿಗೆ ಅತ್ಯಗತ್ಯ ಎಂದರು.

ಶ್ರೀನಿವಾಸ್ ವಿವಿ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಮುಖ್ಯಸ್ಥ ಡಾ. ರಾಮಕೃಷ್ಣಎನ್. ಹೆಗಡೆ ಸ್ವಾಗತಿಸಿದರು. ಟೆಕ್ ಯುವ ಕಾರ್ಯಕ್ರಮದ ಸಂಚಾಲಕ ಪ್ರೊ. ಕೆ.ಶ್ರೀನಾಥ್ ರಾವ್ ಅತಿಥಿ ಪರಿಚಯ ಮಾಡಿದರು. ವಿವಿ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಡಾ. ಶ್ವೇತಾ ಪೈ ವಂದಿಸಿದರು. ವಿವಿ ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಪ್ರವೀಣ್ ಬಿ.ಎಂ., ಟೆಕ್ ಯುವ-25 ರ ವಿದ್ಯಾರ್ಥಿ ಸಮನ್ವಯ ಕಾರರಾದ ಮೊಹಮ್ಮದ್ ಸೈಫಾಜ್, ಆಕಾಶ್ ಕುಲಾಲ್, ಚೈತ್ರಾ ರಾವ್, ಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸ್ಯಾಮ್ ಅವಿನ್ ಬಂಗೇರಾ ನಿರೂಪಿಸಿದರು.

Related posts

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya
error: Content is protected !!