24.5 C
ಪುತ್ತೂರು, ಬೆಳ್ತಂಗಡಿ
March 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

ಮಂಗಳೂರು: ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಯಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ ‘ಟೆಕ್ ಯುವ – 25’ ಮಾ.12 ರಂದು ಉದ್ಘಾಟನೆಗೊಂಡಿತು.

ಬೆಂಗಳೂರಿನ ಐಸ್ಪಿ ಆಕ್ರೋ ರೋಬೋಟಿಕ್ಸ್ ಹಾಗೂ ಮಂಗಳೂರಿನ ಅಗ್ರಿಲೀಫ್ ಪೈವೇಟ್ ಲಿಮಿಟೆಡ್ ಸಂಸ್ಥೆ ಮುಖ್ಯಸ್ಥ, ಸಿಇಒ ಅವಿನಾಶ್ ರಾವ್, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಿಮ್ಮ ಸುತ್ತಮುತ್ತಲಿರುವ ಜನರೊಂದಿಗೆ ಸಂವಹನ ನಡೆಸಿ, ಅವರ ಜೀವನ ಅನುಭವಗಳಿಂದ ಪ್ರೇರಿತರಾಗಿರಿ. ಉತ್ತಮ ನಾಯಕನಾಗಲು ತಂಡದೊಂದಿಗೆ ಕೆಲಸ ಮಾಡುವುದು ಅಗತ್ಯ. ಉತ್ತಮ ಸಂವಹನವು ವ್ಯವಹಾರ ಅಭಿವೃದ್ಧಿಗೆ ಅತ್ಯಗತ್ಯ ಎಂದರು.

ಶ್ರೀನಿವಾಸ್ ವಿವಿ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಮುಖ್ಯಸ್ಥ ಡಾ. ರಾಮಕೃಷ್ಣಎನ್. ಹೆಗಡೆ ಸ್ವಾಗತಿಸಿದರು. ಟೆಕ್ ಯುವ ಕಾರ್ಯಕ್ರಮದ ಸಂಚಾಲಕ ಪ್ರೊ. ಕೆ.ಶ್ರೀನಾಥ್ ರಾವ್ ಅತಿಥಿ ಪರಿಚಯ ಮಾಡಿದರು. ವಿವಿ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಡಾ. ಶ್ವೇತಾ ಪೈ ವಂದಿಸಿದರು. ವಿವಿ ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಪ್ರವೀಣ್ ಬಿ.ಎಂ., ಟೆಕ್ ಯುವ-25 ರ ವಿದ್ಯಾರ್ಥಿ ಸಮನ್ವಯ ಕಾರರಾದ ಮೊಹಮ್ಮದ್ ಸೈಫಾಜ್, ಆಕಾಶ್ ಕುಲಾಲ್, ಚೈತ್ರಾ ರಾವ್, ಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸ್ಯಾಮ್ ಅವಿನ್ ಬಂಗೇರಾ ನಿರೂಪಿಸಿದರು.

Related posts

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!