27.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

ಮಂಗಳೂರು: ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಯಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ ‘ಟೆಕ್ ಯುವ – 25’ ಮಾ.12 ರಂದು ಉದ್ಘಾಟನೆಗೊಂಡಿತು.

ಬೆಂಗಳೂರಿನ ಐಸ್ಪಿ ಆಕ್ರೋ ರೋಬೋಟಿಕ್ಸ್ ಹಾಗೂ ಮಂಗಳೂರಿನ ಅಗ್ರಿಲೀಫ್ ಪೈವೇಟ್ ಲಿಮಿಟೆಡ್ ಸಂಸ್ಥೆ ಮುಖ್ಯಸ್ಥ, ಸಿಇಒ ಅವಿನಾಶ್ ರಾವ್, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಿಮ್ಮ ಸುತ್ತಮುತ್ತಲಿರುವ ಜನರೊಂದಿಗೆ ಸಂವಹನ ನಡೆಸಿ, ಅವರ ಜೀವನ ಅನುಭವಗಳಿಂದ ಪ್ರೇರಿತರಾಗಿರಿ. ಉತ್ತಮ ನಾಯಕನಾಗಲು ತಂಡದೊಂದಿಗೆ ಕೆಲಸ ಮಾಡುವುದು ಅಗತ್ಯ. ಉತ್ತಮ ಸಂವಹನವು ವ್ಯವಹಾರ ಅಭಿವೃದ್ಧಿಗೆ ಅತ್ಯಗತ್ಯ ಎಂದರು.

ಶ್ರೀನಿವಾಸ್ ವಿವಿ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಮುಖ್ಯಸ್ಥ ಡಾ. ರಾಮಕೃಷ್ಣಎನ್. ಹೆಗಡೆ ಸ್ವಾಗತಿಸಿದರು. ಟೆಕ್ ಯುವ ಕಾರ್ಯಕ್ರಮದ ಸಂಚಾಲಕ ಪ್ರೊ. ಕೆ.ಶ್ರೀನಾಥ್ ರಾವ್ ಅತಿಥಿ ಪರಿಚಯ ಮಾಡಿದರು. ವಿವಿ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಡಾ. ಶ್ವೇತಾ ಪೈ ವಂದಿಸಿದರು. ವಿವಿ ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಪ್ರವೀಣ್ ಬಿ.ಎಂ., ಟೆಕ್ ಯುವ-25 ರ ವಿದ್ಯಾರ್ಥಿ ಸಮನ್ವಯ ಕಾರರಾದ ಮೊಹಮ್ಮದ್ ಸೈಫಾಜ್, ಆಕಾಶ್ ಕುಲಾಲ್, ಚೈತ್ರಾ ರಾವ್, ಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸ್ಯಾಮ್ ಅವಿನ್ ಬಂಗೇರಾ ನಿರೂಪಿಸಿದರು.

Related posts

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ 2006ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮ

Suddi Udaya
error: Content is protected !!