30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ವಿಧಾನಸಭೆಯ ಕಲಾಪದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲು ನೀಡಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕರ್ನಾಟಕ ರಾಜಕೀಯ ವ್ಯವಸ್ಥೆಗೆ ಕರಾವಳಿ ಭಾಗದ ಹಿರಿಯರ ಕೊಡುಗೆಯನ್ನು ಸ್ಮರಿಸಿ ಕರಾವಳಿ ಭಾಗದಲ್ಲಿ ಆಗಬೇಕಾದಂತಹ ಪ್ರಮುಖ ಕಾರ್ಯಗಳ ಬಗ್ಗೆ ಶಾಸಕ ಹರೀಶ್ ಪೂಂಜರವರು ತಿಳಿಸಿದರು.

ಅತೀ ಹೆಚ್ಚು ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜುಗಳನ್ನು ಹೊಂದಿದ ದಕ್ಷಿಣಕನ್ನಡ ಜಿಲ್ಲೆ ವರ್ಷಕ್ಕೆ ಸಾವಿರಾರು ತಾಂತ್ರಿಕ ಮತ್ತು ವೈದ್ಯಕೀಯ ಪದವೀಧರರನ್ನು ತಯಾರುಗೊಳಿಸಿ ಸಮಾಜಕ್ಕೆ ನೀಡುತ್ತಿದ್ದರು. ಈ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ವಿಫಲ ಅವಕಾಶಗಳಿದ್ದು ಐ ಟಿ ಪಾರ್ಕ್ ನಂತಹ ಉದ್ಯಮಶೀಲತೆಯನ್ನು ಬೆಳೆಸುವಂತಹ ಸಂಸ್ಥೆಗಳಿಗೆ ಅವಕಾಶ ನೀಡುವಂತೆ ಮನವಿ ಮಾಡಲಾಯಿತು, ಅತ್ಯಂತ ಸುಂದರ ಮತ್ತು ರಮಣೀಯ ಸಮುದ್ರ ತಟಗಳನ್ನು ಹೊಂದಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವಂತೆ ಮನವಿ ಮಾಡಲಾಯಿತು. ಜೊತೆಗೆ ಗಾರ್ಮೆಂಟ್ಸ್ ಕೈಗಾರಿಕೆಗಳ ಸ್ಥಾಪನೆಗೆ ವಿಪುಲ ಅವಕಾಶವಿದ್ದು ಈ ಮೂಲಕ ಸಾವಿರಾರು ಜನರಿಗೆ ಉದ್ಯೋಗ ಸೃಷ್ಟಿಯಾಗಲಿದ್ದು ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಯಿತು. ಅರಣ್ಯ ಇಲಾಖೆಯ ಸಮಸ್ಯೆಯಿಂದಾಗಿ ಜನ ಸಾಮಾನ್ಯರು ವಾಸ್ತವ್ಯವಿರುವ ಹಾಗೂ ಕೃಷಿ ಭೂಮಿಯ ಹಕ್ಕಿನಿಂದ ವಂಚಿತರಾಗಿದ್ದು ಈ ಸಮಸ್ಯೆಯನ್ನು ಬಗೆ ಹರಿಸುವಂತೆ ವಿನಂತಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಖಾಲಿಯಾಗಿರುವ 60 VA ಪೋಸ್ಟ್ಗಳನ್ನು ಭರ್ತಿ ಮಾಡುವಂತೆ ತಿಳಿಸಲಾಯಿತು, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಿ ಎಸ್ ಯಡಿಯೂರಪ್ಪನವರ ಅವಧಿಯಲ್ಲಿ ರಚಿಸಲಾದ ಪಶ್ಚಿಮ ವಾಹಿನಿ ಯೋಜನೆಗೆ ಅನುದಾನವನ್ನು ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ವಿನಂತಿಸಲಾಯಿತು, ಉಭಯ ಜಿಲ್ಲೆಗಳಿಗೆ ಅನುಕೂಲವಾಗುವಂತೆ ಹೈಕೋರ್ಟ್ ನ ಪೀಠವನ್ನು ಕರಾವಳಿ ಭಾಗದಲ್ಲಿ ಸ್ಥಾಪಿಸುವಂತೆ ಮನವಿ ಮಾಡಲಾಯಿತು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಲೆಕುಡಿಯ ಸಮಾಜದ ಬಂಧುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅವರ ಬದುಕನ್ನು ಸುಧಾರಿಸುವಂತೆ ಸರ್ಕಾರವನ್ನು ಆಗ್ರಹಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೋಸ್ಕರ ರಚಿಸಲಾಗಿರುವ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ನ್ಯಾಯಯುತವಾದ ಅನುದಾನವನ್ನು ಬಿಡುಗಡೆಗೊಳಿಸಿ ಅಭಿವೃದ್ಧಿಗೆ ವೇಗ ನೀಡುವಂತೆ ವಿನಂತಿಸಲಾಯಿತು ಹಾಗೂ ಅತಿ ಮುಖ್ಯವಾಗಿ ತುಳುನಾಡಿನ ನಮ್ಮ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು,
ಒಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರ ಅತಿಹೆಚ್ಚಿನ ಗಮನವನ್ನು ಕೊಟ್ಟು ಕರಾವಳಿ ಭಾಗದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಆಗ್ರಹಿಸಲಾಯಿತು.

Related posts

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಕಾಲೇಜು ಮಟ್ಟದ ಸ್ಪರ್ಧೆ ‘ಕ್ರೆಸಿಟಾ’ ಫೆಸ್ಟ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

Suddi Udaya
error: Content is protected !!