25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

ಉರುವಾಲು: ಗೋಕರ್ಣ ಮಂಡಲಾಧೀಶ್ವರ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಸಂಕಲ್ಪದಂತೆ ಅದ್ವೈತ ರಥ ಯಾತ್ರೆ – ಶ್ರೀ ಮಹಾ ಪಾದುಕಾ ಸಂಚಾರ ಗೋಕರ್ಣ ಮಂಡಲಾದ್ಯಂತ ಸಂಚರಿಸುತ್ತಿದ್ದು, ಉರುವಾಲಿನಲ್ಲಿರುವ ಶ್ರೀ ಭಾರತೀ ವಿದ್ಯಾ ಸಂಸ್ಥೆಗೆ ಆಗಮಿಸಿತು.

ವಿದ್ಯಾರ್ಥಿಗಳ ಬ್ಯಾಂಡ್ ವಾದ್ಯ ಜೊತೆಯಲ್ಲಿ ಮಾತೆಯರ ಹಾಗೂ ವಿದ್ಯಾರ್ಥಿನಿಯರ ಪೂರ್ಣ ಕುಂಭದೊಂದಿಗೆ ಅದ್ವೈತ ರಥ ವನ್ನು ಸ್ವಾಗತಿಸಲಾಯಿತು.

ಈಶ್ವರ ಪ್ರಸನ್ನ ಪರ್ನೆಕೋಡಿ , ಅಧ್ಯಕ್ಷರು ಉಪ್ಪಿನಂಗಡಿ ಮಂಡಲ ಇವರು ಪ್ರಾಸ್ತಾವಿಕ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಆಗಮಿಸಿದ ಪದ್ಮುಂಜ ಪ.ಪೂ. ಕಾಲೇಜು ನಿವೃತ್ತ ಪ್ರಾಂಶುಪಾಲರು ಮಹಾಲಿಂಗೇಶ್ವರ ಭಟ್ ಶಂಕರಾಚಾರ್ಯರ ಕುರಿತಾಗಿ ಸಾಕಷ್ಟು ಮಾಹಿತಿಗಳನ್ನು ನೀಡಿದರು.

ವಿಶೇಷ ಅತಿಥಿಗಳಿಗೆ ಶಾಲಾ ವತಿಯಿಂದ ಸ್ಮರಣಿಕೆ ನೀಡಲಾಯಿತು. ಶಾಲಾ ಸೇವಾ ಸಮಿತಿಯ ಮಾಜಿ ಅಧ್ಯಕ್ಷ ದಿವಾಕರ ಶಾಸ್ತ್ರೀ ಸ್ವಾಗತಿಸಿದರು .ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸೇವಾ ಸಮಿತಿಯ ಸದಸ್ಯ ಸತ್ಯ ಶಂಕರ ಭಟ್ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಸರ್ವ ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಸರ್ವ ಸದಸ್ಯರು, ಪೋಷಕರು, ಹಿತೈಷಿಗಳು , ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಪಾತ್ರರಾದರು.

Related posts

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya
error: Content is protected !!