September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

ಉರುವಾಲು: ಗೋಕರ್ಣ ಮಂಡಲಾಧೀಶ್ವರ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಸಂಕಲ್ಪದಂತೆ ಅದ್ವೈತ ರಥ ಯಾತ್ರೆ – ಶ್ರೀ ಮಹಾ ಪಾದುಕಾ ಸಂಚಾರ ಗೋಕರ್ಣ ಮಂಡಲಾದ್ಯಂತ ಸಂಚರಿಸುತ್ತಿದ್ದು, ಉರುವಾಲಿನಲ್ಲಿರುವ ಶ್ರೀ ಭಾರತೀ ವಿದ್ಯಾ ಸಂಸ್ಥೆಗೆ ಆಗಮಿಸಿತು.

ವಿದ್ಯಾರ್ಥಿಗಳ ಬ್ಯಾಂಡ್ ವಾದ್ಯ ಜೊತೆಯಲ್ಲಿ ಮಾತೆಯರ ಹಾಗೂ ವಿದ್ಯಾರ್ಥಿನಿಯರ ಪೂರ್ಣ ಕುಂಭದೊಂದಿಗೆ ಅದ್ವೈತ ರಥ ವನ್ನು ಸ್ವಾಗತಿಸಲಾಯಿತು.

ಈಶ್ವರ ಪ್ರಸನ್ನ ಪರ್ನೆಕೋಡಿ , ಅಧ್ಯಕ್ಷರು ಉಪ್ಪಿನಂಗಡಿ ಮಂಡಲ ಇವರು ಪ್ರಾಸ್ತಾವಿಕ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಆಗಮಿಸಿದ ಪದ್ಮುಂಜ ಪ.ಪೂ. ಕಾಲೇಜು ನಿವೃತ್ತ ಪ್ರಾಂಶುಪಾಲರು ಮಹಾಲಿಂಗೇಶ್ವರ ಭಟ್ ಶಂಕರಾಚಾರ್ಯರ ಕುರಿತಾಗಿ ಸಾಕಷ್ಟು ಮಾಹಿತಿಗಳನ್ನು ನೀಡಿದರು.

ವಿಶೇಷ ಅತಿಥಿಗಳಿಗೆ ಶಾಲಾ ವತಿಯಿಂದ ಸ್ಮರಣಿಕೆ ನೀಡಲಾಯಿತು. ಶಾಲಾ ಸೇವಾ ಸಮಿತಿಯ ಮಾಜಿ ಅಧ್ಯಕ್ಷ ದಿವಾಕರ ಶಾಸ್ತ್ರೀ ಸ್ವಾಗತಿಸಿದರು .ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸೇವಾ ಸಮಿತಿಯ ಸದಸ್ಯ ಸತ್ಯ ಶಂಕರ ಭಟ್ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಸರ್ವ ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಸರ್ವ ಸದಸ್ಯರು, ಪೋಷಕರು, ಹಿತೈಷಿಗಳು , ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಪಾತ್ರರಾದರು.

Related posts

ಮಿತ್ತಬಾಗಿಲು: ಮನೆಯ ಒಳಗೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಉರಗ ತಜ್ಞ ಸ್ನೇಕ್ ಜಾಯ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!