25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

ಉರುವಾಲು: ಗೋಕರ್ಣ ಮಂಡಲಾಧೀಶ್ವರ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಸಂಕಲ್ಪದಂತೆ ಅದ್ವೈತ ರಥ ಯಾತ್ರೆ – ಶ್ರೀ ಮಹಾ ಪಾದುಕಾ ಸಂಚಾರ ಗೋಕರ್ಣ ಮಂಡಲಾದ್ಯಂತ ಸಂಚರಿಸುತ್ತಿದ್ದು, ಉರುವಾಲಿನಲ್ಲಿರುವ ಶ್ರೀ ಭಾರತೀ ವಿದ್ಯಾ ಸಂಸ್ಥೆಗೆ ಆಗಮಿಸಿತು.

ವಿದ್ಯಾರ್ಥಿಗಳ ಬ್ಯಾಂಡ್ ವಾದ್ಯ ಜೊತೆಯಲ್ಲಿ ಮಾತೆಯರ ಹಾಗೂ ವಿದ್ಯಾರ್ಥಿನಿಯರ ಪೂರ್ಣ ಕುಂಭದೊಂದಿಗೆ ಅದ್ವೈತ ರಥ ವನ್ನು ಸ್ವಾಗತಿಸಲಾಯಿತು.

ಈಶ್ವರ ಪ್ರಸನ್ನ ಪರ್ನೆಕೋಡಿ , ಅಧ್ಯಕ್ಷರು ಉಪ್ಪಿನಂಗಡಿ ಮಂಡಲ ಇವರು ಪ್ರಾಸ್ತಾವಿಕ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಆಗಮಿಸಿದ ಪದ್ಮುಂಜ ಪ.ಪೂ. ಕಾಲೇಜು ನಿವೃತ್ತ ಪ್ರಾಂಶುಪಾಲರು ಮಹಾಲಿಂಗೇಶ್ವರ ಭಟ್ ಶಂಕರಾಚಾರ್ಯರ ಕುರಿತಾಗಿ ಸಾಕಷ್ಟು ಮಾಹಿತಿಗಳನ್ನು ನೀಡಿದರು.

ವಿಶೇಷ ಅತಿಥಿಗಳಿಗೆ ಶಾಲಾ ವತಿಯಿಂದ ಸ್ಮರಣಿಕೆ ನೀಡಲಾಯಿತು. ಶಾಲಾ ಸೇವಾ ಸಮಿತಿಯ ಮಾಜಿ ಅಧ್ಯಕ್ಷ ದಿವಾಕರ ಶಾಸ್ತ್ರೀ ಸ್ವಾಗತಿಸಿದರು .ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸೇವಾ ಸಮಿತಿಯ ಸದಸ್ಯ ಸತ್ಯ ಶಂಕರ ಭಟ್ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಸರ್ವ ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಸರ್ವ ಸದಸ್ಯರು, ಪೋಷಕರು, ಹಿತೈಷಿಗಳು , ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಪಾತ್ರರಾದರು.

Related posts

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya
error: Content is protected !!