22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

ಉರುವಾಲು: ಗೋಕರ್ಣ ಮಂಡಲಾಧೀಶ್ವರ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಸಂಕಲ್ಪದಂತೆ ಅದ್ವೈತ ರಥ ಯಾತ್ರೆ – ಶ್ರೀ ಮಹಾ ಪಾದುಕಾ ಸಂಚಾರ ಗೋಕರ್ಣ ಮಂಡಲಾದ್ಯಂತ ಸಂಚರಿಸುತ್ತಿದ್ದು, ಉರುವಾಲಿನಲ್ಲಿರುವ ಶ್ರೀ ಭಾರತೀ ವಿದ್ಯಾ ಸಂಸ್ಥೆಗೆ ಆಗಮಿಸಿತು.

ವಿದ್ಯಾರ್ಥಿಗಳ ಬ್ಯಾಂಡ್ ವಾದ್ಯ ಜೊತೆಯಲ್ಲಿ ಮಾತೆಯರ ಹಾಗೂ ವಿದ್ಯಾರ್ಥಿನಿಯರ ಪೂರ್ಣ ಕುಂಭದೊಂದಿಗೆ ಅದ್ವೈತ ರಥ ವನ್ನು ಸ್ವಾಗತಿಸಲಾಯಿತು.

ಈಶ್ವರ ಪ್ರಸನ್ನ ಪರ್ನೆಕೋಡಿ , ಅಧ್ಯಕ್ಷರು ಉಪ್ಪಿನಂಗಡಿ ಮಂಡಲ ಇವರು ಪ್ರಾಸ್ತಾವಿಕ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಆಗಮಿಸಿದ ಪದ್ಮುಂಜ ಪ.ಪೂ. ಕಾಲೇಜು ನಿವೃತ್ತ ಪ್ರಾಂಶುಪಾಲರು ಮಹಾಲಿಂಗೇಶ್ವರ ಭಟ್ ಶಂಕರಾಚಾರ್ಯರ ಕುರಿತಾಗಿ ಸಾಕಷ್ಟು ಮಾಹಿತಿಗಳನ್ನು ನೀಡಿದರು.

ವಿಶೇಷ ಅತಿಥಿಗಳಿಗೆ ಶಾಲಾ ವತಿಯಿಂದ ಸ್ಮರಣಿಕೆ ನೀಡಲಾಯಿತು. ಶಾಲಾ ಸೇವಾ ಸಮಿತಿಯ ಮಾಜಿ ಅಧ್ಯಕ್ಷ ದಿವಾಕರ ಶಾಸ್ತ್ರೀ ಸ್ವಾಗತಿಸಿದರು .ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸೇವಾ ಸಮಿತಿಯ ಸದಸ್ಯ ಸತ್ಯ ಶಂಕರ ಭಟ್ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಸರ್ವ ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಸರ್ವ ಸದಸ್ಯರು, ಪೋಷಕರು, ಹಿತೈಷಿಗಳು , ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಪಾತ್ರರಾದರು.

Related posts

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya
error: Content is protected !!