25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ಮಾ.13 ರಂದು ಗೂಗಲ್ ಮೀಟ್‌ನಲ್ಲಿ ಮಾತೃ ದೇವೋ ಭವ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಶಾರದಾ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾರದಾ ಸ್ತುತಿಯೊಂದಿಗೆ ಕಾರ್ಯಕ್ರಮವನ್ನು ಘಟಕದ ಅಧ್ಯಕ್ಷೆ ಶ್ರೀಮತಿ ಆಶಾ ಅಡೂರು ಪ್ರಾರಂಭಿಸಿದರು.

ಸಂಸಾರ/ಸಮಾಜದ ವ್ಯವಸ್ಥಿತ ಸ್ವರೂಪದ ಚೈತನ್ಯಕ್ಕೆ ಚೇತನಾ ಶಕ್ತಿ ಪುರುಷನಾದರೆ ಬೆಳಕಾಗಿ ಸ್ತ್ರೀ ಹೊಳೆಯುವಳು. ಸಮಾನತೆ ಬೇಕು ಎಂಬ ಸಂಘಟನೆಯಿಂದ ತನ್ನೊಳಗಿನ ತನ್ನನ್ನೇ ಮರೆಯುತ್ತಿದ್ದಾಳೆ ಸ್ತ್ರೀ. ಮಹಿಳಾ ದಿನಾಚರಣೆ ನಮ್ಮ ಸಂಸ್ಕೃತಿ ಖಂಡಿತ ಅಲ್ಲ. ಪಾಶ್ಚಾತ್ಯ ಸಂಸ್ಕೃತಿಗೆ ನಮ್ಮನ್ನು ನಾವು ತೊಡಗಿಸಿಕೊಂಡು ಮೌಲ್ಯವನ್ನು ಕಾಣದೇ ಕುರುಡರಾಗೋ ಪರಿಸ್ಥಿತಿ ಎದುರಾಗಿದೆ. ತನ್ನೊಳಗೆ ತಾನು ಹೊಕ್ಕು, ತನ್ನನ್ನು ತಾನು ಗೌರವಿಸುವುದನ್ನು ಕಲಿತು ನಂಬಿಕೆಯಿಂದ ಮುಂದುವರೆದಾಗ ಸ್ತ್ರೀಗೆ ತನಗೆ ಇರುವ ಮಹತ್ವದ ಅರಿವು ಮೂಡುತ್ತದೆ. ಹೀಗಾದಾಗ ಹೋರಾಟಗಳನ್ನು ಮಾಡುವ ಸಂದರ್ಭಗಳು ಸೃಷ್ಟಿಯಾಗಲಾರದು. ಒಟ್ಟಿನಲ್ಲಿ ಸಂಸ್ಕೃತಿ ಸಂಸ್ಕಾರಗಳನ್ನು ರೂಢಿಸಿಕೊಂಡು ಮುನ್ನಡೆದಾಗ ಮಾತ್ರ ಏಳಿಗೆಯೆಂಬ ಮೆಟ್ಟಿಲೇರಿ ಸಾಧನೆ ಮಾಡಲು ಸಾಧ್ಯ ಎಂಬುದಾಗಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ವಕೀಲರು, ಕವಯಿತ್ರಿ, ವಿಮರ್ಶಕಿ ಹಾಗೂ ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಸಂಸ್ಥಾಪಕಿ ಪರಿಮಳಾ ರಾವ್ ಇವರು ತಮ್ಮ ಉಪನ್ಯಾಸದ ನೆಲೆಯಲ್ಲಿ ಹೆಣ್ಣಿನ ಮಹತ್ವದ ಬಗ್ಗೆ ನುಡಿಗಳನ್ನಾಡಿದರು.

ಅಭಾಸಾಪ ವಿಭಾಗ ಸಂಯೋಜಕರಾದ ಸುಂದರ ಶೆಟ್ಟಿ ಇಳಂತಿಲ, ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷ ಪ್ರೊ. ಗಣಪತಿ ಭಟ್ ಕುಳಮರ್ವ, ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿ ಬೆಳ್ತಂಗಡಿ ಹಾಗೂ ಅನೇಕ ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಹಿಳಾ ಪ್ರಕಾರದ ಪ್ರಮುಖ್ ಶ್ರೀಮತಿ ವನಿತಾ ಶೆಟ್ಟಿ ಸ್ವಾಗತಿಸಿ, ಘಟಕದ ಕೋಶಾಧಿಕಾರಿ ಶ್ರೀಮತಿ ನಯನಾ ಟಿ ಧನ್ಯವಾದವನ್ನಿತ್ತರು. ಕಾರ್ಯದರ್ಶಿ ಶ್ರೀಮತಿ ಮೇಘನಾ ಪ್ರಶಾಂತ್ ಕಾರ್ಯಕ್ರಮವನ್ನು ನಿರ್ವಹಿಸಿದರು.

Related posts

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಹತ್ಯಡ್ಕ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya
error: Content is protected !!