March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಇದರ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರು ದಿ| ಪದ್ಮನಾಭ ಎನ್. ಮಾಣಿಂಜ ಇವರ ಸಂಘಕ್ಕೆ ನೀಡಿದ ಮಾರ್ಗದರ್ಶಕ ಸೇವೆಯನ್ನು ಸ್ಮರಿಸಿ ನುಡಿನಮನ ಕಾರ್ಯಕ್ರಮ ಸಂಘದ ದಿ| ಜಿ.ಎನ್. ಭಿಡೆ ಸಭಾಭವನದಲ್ಲಿ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಜಿ ಭಿಡೆ ಯವರು ಮಾತನಾಡಿ ಮಿತಭಾಷಿಯಾಗಿದ್ದ ಶ್ರೀಯುತರು ಸರಕಾರಿ ಉನ್ನತ ಸೇವೆಯ ಅನುಭವವನ್ನು ಸಂಘಕ್ಕೆ ಅನೇಕ ಅವಧಿಗೆ ಉಪಾಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ನೀಡಿದ್ದರು ಹಾಗೂ ಸಮಾಜದಲ್ಲಿ ಉನ್ನತ ಗೌರವಕ್ಕೆ ಪಾತ್ರರಾಗಿದ್ದರು ಎಂದು ನೆನಪಿಸಿಕೊಂಡರು. ಉಪಾಧ್ಯಕ್ಷ ಎಂ. ಅನಂತ ಭಟ್ ಇವರು ಶ್ರೀಯುತರ ಕಾರ್ಯಸಾಧನೆಯಲ್ಲಿನ ಧೀಮಂತಿಕೆಯನ್ನು ಮತ್ತು ಒಡನಾಟ ನೆನಪಿಸಿಕೊಂಡು ಗೌರವ ಸಮರ್ಪಿಸಿದರು.

ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿಯವರು ಕಾರ್ಯಕ್ರಮ ನಿರ್ವಹಿಸಿ ಸಂಘದಲ್ಲಿ ಆರಂಭ ದಿನಗಳಲ್ಲೇ ಸದಸ್ಯರಾಗಿದ್ದ ದಿ| ಪದ್ಮನಾಭ ಎನ್. ಮಾಣಿಂಜ ರವರು ಸಂಘದಲ್ಲಿ 2005 ರಿಂದ 2020 ರ ಅವಧಿಗೆ ಉಪಾಧ್ಯಕ್ಷರಾಗಿ ಹಾಗೂ 1996 ರಿಂದ ಈವರೆಗೂ ಆಡಳಿತ ಮಂಡಳಿಯಲ್ಲಿ ನಿರ್ದೇಶಕರಾಗಿ ಸಂಘದ ಬೆಳವಣಿಗೆಯಲ್ಲಿ ದೊಡ್ಡ ಪಾತ್ರವಹಿಸಿದವರು ಎಂದು ನೆನೆದು ನುಡಿನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಶ್ರೀಮತಿ ಜಯಶ್ರೀ ಡಿ.ಎಂ., ಗ್ರೇಸಿಯನ್ ವೇಗಸ್, ಸೋಮನಾಥ ಬಂಗೇರ, ಕೆ.ಜೆ. ಅಗಸ್ಟಿನ್, ವಿ.ವಿ. ಅಬ್ರಾಹಂ, ಬಾಲಕೃಷ್ಣ ಗೌಡ ಕೆ., ಅಬ್ರಾಹಂ ಬಿ.ಎಸ್., ಶಶಿಧರ ಡೋಂಗ್ರೆ, ರಾಮ ನಾಯ್ಕ, ಬೈರಪ್ಪ, ಶ್ರೀಮತಿ ಆರ್. ಸುಭಾಷಿಣಿ ಹಾಗೂ ಸಂಘದ ಸಿಬ್ಬಂದಿ ವರ್ಗ ಭಾಗವಹಿಸಿ ಭಾವಚಿತ್ರಕ್ಕೆ ಗೌರವ ಸಮರ್ಪಿಸಿದರು.

Related posts

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya
error: Content is protected !!