23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

ಮಂಗಳೂರು: ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಯಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ ‘ಟೆಕ್ ಯುವ – 25’ ಮಾ.12 ರಂದು ಉದ್ಘಾಟನೆಗೊಂಡಿತು.

ಬೆಂಗಳೂರಿನ ಐಸ್ಪಿ ಆಕ್ರೋ ರೋಬೋಟಿಕ್ಸ್ ಹಾಗೂ ಮಂಗಳೂರಿನ ಅಗ್ರಿಲೀಫ್ ಪೈವೇಟ್ ಲಿಮಿಟೆಡ್ ಸಂಸ್ಥೆ ಮುಖ್ಯಸ್ಥ, ಸಿಇಒ ಅವಿನಾಶ್ ರಾವ್, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಿಮ್ಮ ಸುತ್ತಮುತ್ತಲಿರುವ ಜನರೊಂದಿಗೆ ಸಂವಹನ ನಡೆಸಿ, ಅವರ ಜೀವನ ಅನುಭವಗಳಿಂದ ಪ್ರೇರಿತರಾಗಿರಿ. ಉತ್ತಮ ನಾಯಕನಾಗಲು ತಂಡದೊಂದಿಗೆ ಕೆಲಸ ಮಾಡುವುದು ಅಗತ್ಯ. ಉತ್ತಮ ಸಂವಹನವು ವ್ಯವಹಾರ ಅಭಿವೃದ್ಧಿಗೆ ಅತ್ಯಗತ್ಯ ಎಂದರು.

ಶ್ರೀನಿವಾಸ್ ವಿವಿ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಮುಖ್ಯಸ್ಥ ಡಾ. ರಾಮಕೃಷ್ಣಎನ್. ಹೆಗಡೆ ಸ್ವಾಗತಿಸಿದರು. ಟೆಕ್ ಯುವ ಕಾರ್ಯಕ್ರಮದ ಸಂಚಾಲಕ ಪ್ರೊ. ಕೆ.ಶ್ರೀನಾಥ್ ರಾವ್ ಅತಿಥಿ ಪರಿಚಯ ಮಾಡಿದರು. ವಿವಿ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಡಾ. ಶ್ವೇತಾ ಪೈ ವಂದಿಸಿದರು. ವಿವಿ ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಪ್ರವೀಣ್ ಬಿ.ಎಂ., ಟೆಕ್ ಯುವ-25 ರ ವಿದ್ಯಾರ್ಥಿ ಸಮನ್ವಯ ಕಾರರಾದ ಮೊಹಮ್ಮದ್ ಸೈಫಾಜ್, ಆಕಾಶ್ ಕುಲಾಲ್, ಚೈತ್ರಾ ರಾವ್, ಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸ್ಯಾಮ್ ಅವಿನ್ ಬಂಗೇರಾ ನಿರೂಪಿಸಿದರು.

Related posts

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya
error: Content is protected !!