27.8 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

ಮಂಗಳೂರು: ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಯಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ ‘ಟೆಕ್ ಯುವ – 25’ ಮಾ.12 ರಂದು ಉದ್ಘಾಟನೆಗೊಂಡಿತು.

ಬೆಂಗಳೂರಿನ ಐಸ್ಪಿ ಆಕ್ರೋ ರೋಬೋಟಿಕ್ಸ್ ಹಾಗೂ ಮಂಗಳೂರಿನ ಅಗ್ರಿಲೀಫ್ ಪೈವೇಟ್ ಲಿಮಿಟೆಡ್ ಸಂಸ್ಥೆ ಮುಖ್ಯಸ್ಥ, ಸಿಇಒ ಅವಿನಾಶ್ ರಾವ್, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಿಮ್ಮ ಸುತ್ತಮುತ್ತಲಿರುವ ಜನರೊಂದಿಗೆ ಸಂವಹನ ನಡೆಸಿ, ಅವರ ಜೀವನ ಅನುಭವಗಳಿಂದ ಪ್ರೇರಿತರಾಗಿರಿ. ಉತ್ತಮ ನಾಯಕನಾಗಲು ತಂಡದೊಂದಿಗೆ ಕೆಲಸ ಮಾಡುವುದು ಅಗತ್ಯ. ಉತ್ತಮ ಸಂವಹನವು ವ್ಯವಹಾರ ಅಭಿವೃದ್ಧಿಗೆ ಅತ್ಯಗತ್ಯ ಎಂದರು.

ಶ್ರೀನಿವಾಸ್ ವಿವಿ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಮುಖ್ಯಸ್ಥ ಡಾ. ರಾಮಕೃಷ್ಣಎನ್. ಹೆಗಡೆ ಸ್ವಾಗತಿಸಿದರು. ಟೆಕ್ ಯುವ ಕಾರ್ಯಕ್ರಮದ ಸಂಚಾಲಕ ಪ್ರೊ. ಕೆ.ಶ್ರೀನಾಥ್ ರಾವ್ ಅತಿಥಿ ಪರಿಚಯ ಮಾಡಿದರು. ವಿವಿ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಡಾ. ಶ್ವೇತಾ ಪೈ ವಂದಿಸಿದರು. ವಿವಿ ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಪ್ರವೀಣ್ ಬಿ.ಎಂ., ಟೆಕ್ ಯುವ-25 ರ ವಿದ್ಯಾರ್ಥಿ ಸಮನ್ವಯ ಕಾರರಾದ ಮೊಹಮ್ಮದ್ ಸೈಫಾಜ್, ಆಕಾಶ್ ಕುಲಾಲ್, ಚೈತ್ರಾ ರಾವ್, ಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸ್ಯಾಮ್ ಅವಿನ್ ಬಂಗೇರಾ ನಿರೂಪಿಸಿದರು.

Related posts

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!