July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

ಉರುವಾಲು: ಗೋಕರ್ಣ ಮಂಡಲಾಧೀಶ್ವರ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಸಂಕಲ್ಪದಂತೆ ಅದ್ವೈತ ರಥ ಯಾತ್ರೆ – ಶ್ರೀ ಮಹಾ ಪಾದುಕಾ ಸಂಚಾರ ಗೋಕರ್ಣ ಮಂಡಲಾದ್ಯಂತ ಸಂಚರಿಸುತ್ತಿದ್ದು, ಉರುವಾಲಿನಲ್ಲಿರುವ ಶ್ರೀ ಭಾರತೀ ವಿದ್ಯಾ ಸಂಸ್ಥೆಗೆ ಆಗಮಿಸಿತು.

ವಿದ್ಯಾರ್ಥಿಗಳ ಬ್ಯಾಂಡ್ ವಾದ್ಯ ಜೊತೆಯಲ್ಲಿ ಮಾತೆಯರ ಹಾಗೂ ವಿದ್ಯಾರ್ಥಿನಿಯರ ಪೂರ್ಣ ಕುಂಭದೊಂದಿಗೆ ಅದ್ವೈತ ರಥ ವನ್ನು ಸ್ವಾಗತಿಸಲಾಯಿತು.

ಈಶ್ವರ ಪ್ರಸನ್ನ ಪರ್ನೆಕೋಡಿ , ಅಧ್ಯಕ್ಷರು ಉಪ್ಪಿನಂಗಡಿ ಮಂಡಲ ಇವರು ಪ್ರಾಸ್ತಾವಿಕ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಆಗಮಿಸಿದ ಪದ್ಮುಂಜ ಪ.ಪೂ. ಕಾಲೇಜು ನಿವೃತ್ತ ಪ್ರಾಂಶುಪಾಲರು ಮಹಾಲಿಂಗೇಶ್ವರ ಭಟ್ ಶಂಕರಾಚಾರ್ಯರ ಕುರಿತಾಗಿ ಸಾಕಷ್ಟು ಮಾಹಿತಿಗಳನ್ನು ನೀಡಿದರು.

ವಿಶೇಷ ಅತಿಥಿಗಳಿಗೆ ಶಾಲಾ ವತಿಯಿಂದ ಸ್ಮರಣಿಕೆ ನೀಡಲಾಯಿತು. ಶಾಲಾ ಸೇವಾ ಸಮಿತಿಯ ಮಾಜಿ ಅಧ್ಯಕ್ಷ ದಿವಾಕರ ಶಾಸ್ತ್ರೀ ಸ್ವಾಗತಿಸಿದರು .ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸೇವಾ ಸಮಿತಿಯ ಸದಸ್ಯ ಸತ್ಯ ಶಂಕರ ಭಟ್ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಸರ್ವ ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಸರ್ವ ಸದಸ್ಯರು, ಪೋಷಕರು, ಹಿತೈಷಿಗಳು , ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಪಾತ್ರರಾದರು.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿoಜೆ ರವರಿಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಭಕ್ತಿ ಹೆಜ್ಜೆ ಬಳಗದಿಂದ ಸನ್ಮಾನ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya
error: Content is protected !!