September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

ಉರುವಾಲು: ಗೋಕರ್ಣ ಮಂಡಲಾಧೀಶ್ವರ ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಸಂಕಲ್ಪದಂತೆ ಅದ್ವೈತ ರಥ ಯಾತ್ರೆ – ಶ್ರೀ ಮಹಾ ಪಾದುಕಾ ಸಂಚಾರ ಗೋಕರ್ಣ ಮಂಡಲಾದ್ಯಂತ ಸಂಚರಿಸುತ್ತಿದ್ದು, ಉರುವಾಲಿನಲ್ಲಿರುವ ಶ್ರೀ ಭಾರತೀ ವಿದ್ಯಾ ಸಂಸ್ಥೆಗೆ ಆಗಮಿಸಿತು.

ವಿದ್ಯಾರ್ಥಿಗಳ ಬ್ಯಾಂಡ್ ವಾದ್ಯ ಜೊತೆಯಲ್ಲಿ ಮಾತೆಯರ ಹಾಗೂ ವಿದ್ಯಾರ್ಥಿನಿಯರ ಪೂರ್ಣ ಕುಂಭದೊಂದಿಗೆ ಅದ್ವೈತ ರಥ ವನ್ನು ಸ್ವಾಗತಿಸಲಾಯಿತು.

ಈಶ್ವರ ಪ್ರಸನ್ನ ಪರ್ನೆಕೋಡಿ , ಅಧ್ಯಕ್ಷರು ಉಪ್ಪಿನಂಗಡಿ ಮಂಡಲ ಇವರು ಪ್ರಾಸ್ತಾವಿಕ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಆಗಮಿಸಿದ ಪದ್ಮುಂಜ ಪ.ಪೂ. ಕಾಲೇಜು ನಿವೃತ್ತ ಪ್ರಾಂಶುಪಾಲರು ಮಹಾಲಿಂಗೇಶ್ವರ ಭಟ್ ಶಂಕರಾಚಾರ್ಯರ ಕುರಿತಾಗಿ ಸಾಕಷ್ಟು ಮಾಹಿತಿಗಳನ್ನು ನೀಡಿದರು.

ವಿಶೇಷ ಅತಿಥಿಗಳಿಗೆ ಶಾಲಾ ವತಿಯಿಂದ ಸ್ಮರಣಿಕೆ ನೀಡಲಾಯಿತು. ಶಾಲಾ ಸೇವಾ ಸಮಿತಿಯ ಮಾಜಿ ಅಧ್ಯಕ್ಷ ದಿವಾಕರ ಶಾಸ್ತ್ರೀ ಸ್ವಾಗತಿಸಿದರು .ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸೇವಾ ಸಮಿತಿಯ ಸದಸ್ಯ ಸತ್ಯ ಶಂಕರ ಭಟ್ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಸರ್ವ ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಸರ್ವ ಸದಸ್ಯರು, ಪೋಷಕರು, ಹಿತೈಷಿಗಳು , ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಪಾತ್ರರಾದರು.

Related posts

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya
error: Content is protected !!