September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಇದರ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರು ದಿ| ಪದ್ಮನಾಭ ಎನ್. ಮಾಣಿಂಜ ಇವರ ಸಂಘಕ್ಕೆ ನೀಡಿದ ಮಾರ್ಗದರ್ಶಕ ಸೇವೆಯನ್ನು ಸ್ಮರಿಸಿ ನುಡಿನಮನ ಕಾರ್ಯಕ್ರಮ ಸಂಘದ ದಿ| ಜಿ.ಎನ್. ಭಿಡೆ ಸಭಾಭವನದಲ್ಲಿ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಜಿ ಭಿಡೆ ಯವರು ಮಾತನಾಡಿ ಮಿತಭಾಷಿಯಾಗಿದ್ದ ಶ್ರೀಯುತರು ಸರಕಾರಿ ಉನ್ನತ ಸೇವೆಯ ಅನುಭವವನ್ನು ಸಂಘಕ್ಕೆ ಅನೇಕ ಅವಧಿಗೆ ಉಪಾಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ನೀಡಿದ್ದರು ಹಾಗೂ ಸಮಾಜದಲ್ಲಿ ಉನ್ನತ ಗೌರವಕ್ಕೆ ಪಾತ್ರರಾಗಿದ್ದರು ಎಂದು ನೆನಪಿಸಿಕೊಂಡರು. ಉಪಾಧ್ಯಕ್ಷ ಎಂ. ಅನಂತ ಭಟ್ ಇವರು ಶ್ರೀಯುತರ ಕಾರ್ಯಸಾಧನೆಯಲ್ಲಿನ ಧೀಮಂತಿಕೆಯನ್ನು ಮತ್ತು ಒಡನಾಟ ನೆನಪಿಸಿಕೊಂಡು ಗೌರವ ಸಮರ್ಪಿಸಿದರು.

ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿಯವರು ಕಾರ್ಯಕ್ರಮ ನಿರ್ವಹಿಸಿ ಸಂಘದಲ್ಲಿ ಆರಂಭ ದಿನಗಳಲ್ಲೇ ಸದಸ್ಯರಾಗಿದ್ದ ದಿ| ಪದ್ಮನಾಭ ಎನ್. ಮಾಣಿಂಜ ರವರು ಸಂಘದಲ್ಲಿ 2005 ರಿಂದ 2020 ರ ಅವಧಿಗೆ ಉಪಾಧ್ಯಕ್ಷರಾಗಿ ಹಾಗೂ 1996 ರಿಂದ ಈವರೆಗೂ ಆಡಳಿತ ಮಂಡಳಿಯಲ್ಲಿ ನಿರ್ದೇಶಕರಾಗಿ ಸಂಘದ ಬೆಳವಣಿಗೆಯಲ್ಲಿ ದೊಡ್ಡ ಪಾತ್ರವಹಿಸಿದವರು ಎಂದು ನೆನೆದು ನುಡಿನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಶ್ರೀಮತಿ ಜಯಶ್ರೀ ಡಿ.ಎಂ., ಗ್ರೇಸಿಯನ್ ವೇಗಸ್, ಸೋಮನಾಥ ಬಂಗೇರ, ಕೆ.ಜೆ. ಅಗಸ್ಟಿನ್, ವಿ.ವಿ. ಅಬ್ರಾಹಂ, ಬಾಲಕೃಷ್ಣ ಗೌಡ ಕೆ., ಅಬ್ರಾಹಂ ಬಿ.ಎಸ್., ಶಶಿಧರ ಡೋಂಗ್ರೆ, ರಾಮ ನಾಯ್ಕ, ಬೈರಪ್ಪ, ಶ್ರೀಮತಿ ಆರ್. ಸುಭಾಷಿಣಿ ಹಾಗೂ ಸಂಘದ ಸಿಬ್ಬಂದಿ ವರ್ಗ ಭಾಗವಹಿಸಿ ಭಾವಚಿತ್ರಕ್ಕೆ ಗೌರವ ಸಮರ್ಪಿಸಿದರು.

Related posts

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya
error: Content is protected !!