26.5 C
ಪುತ್ತೂರು, ಬೆಳ್ತಂಗಡಿ
March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

ಮಂಗಳೂರು: ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಯಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ ‘ಟೆಕ್ ಯುವ – 25’ ಮಾ.12 ರಂದು ಉದ್ಘಾಟನೆಗೊಂಡಿತು.

ಬೆಂಗಳೂರಿನ ಐಸ್ಪಿ ಆಕ್ರೋ ರೋಬೋಟಿಕ್ಸ್ ಹಾಗೂ ಮಂಗಳೂರಿನ ಅಗ್ರಿಲೀಫ್ ಪೈವೇಟ್ ಲಿಮಿಟೆಡ್ ಸಂಸ್ಥೆ ಮುಖ್ಯಸ್ಥ, ಸಿಇಒ ಅವಿನಾಶ್ ರಾವ್, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಿಮ್ಮ ಸುತ್ತಮುತ್ತಲಿರುವ ಜನರೊಂದಿಗೆ ಸಂವಹನ ನಡೆಸಿ, ಅವರ ಜೀವನ ಅನುಭವಗಳಿಂದ ಪ್ರೇರಿತರಾಗಿರಿ. ಉತ್ತಮ ನಾಯಕನಾಗಲು ತಂಡದೊಂದಿಗೆ ಕೆಲಸ ಮಾಡುವುದು ಅಗತ್ಯ. ಉತ್ತಮ ಸಂವಹನವು ವ್ಯವಹಾರ ಅಭಿವೃದ್ಧಿಗೆ ಅತ್ಯಗತ್ಯ ಎಂದರು.

ಶ್ರೀನಿವಾಸ್ ವಿವಿ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಮುಖ್ಯಸ್ಥ ಡಾ. ರಾಮಕೃಷ್ಣಎನ್. ಹೆಗಡೆ ಸ್ವಾಗತಿಸಿದರು. ಟೆಕ್ ಯುವ ಕಾರ್ಯಕ್ರಮದ ಸಂಚಾಲಕ ಪ್ರೊ. ಕೆ.ಶ್ರೀನಾಥ್ ರಾವ್ ಅತಿಥಿ ಪರಿಚಯ ಮಾಡಿದರು. ವಿವಿ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಡಾ. ಶ್ವೇತಾ ಪೈ ವಂದಿಸಿದರು. ವಿವಿ ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಪ್ರವೀಣ್ ಬಿ.ಎಂ., ಟೆಕ್ ಯುವ-25 ರ ವಿದ್ಯಾರ್ಥಿ ಸಮನ್ವಯ ಕಾರರಾದ ಮೊಹಮ್ಮದ್ ಸೈಫಾಜ್, ಆಕಾಶ್ ಕುಲಾಲ್, ಚೈತ್ರಾ ರಾವ್, ಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸ್ಯಾಮ್ ಅವಿನ್ ಬಂಗೇರಾ ನಿರೂಪಿಸಿದರು.

Related posts

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!