July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

ಮಂಗಳೂರು: ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಯಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ ‘ಟೆಕ್ ಯುವ – 25’ ಮಾ.12 ರಂದು ಉದ್ಘಾಟನೆಗೊಂಡಿತು.

ಬೆಂಗಳೂರಿನ ಐಸ್ಪಿ ಆಕ್ರೋ ರೋಬೋಟಿಕ್ಸ್ ಹಾಗೂ ಮಂಗಳೂರಿನ ಅಗ್ರಿಲೀಫ್ ಪೈವೇಟ್ ಲಿಮಿಟೆಡ್ ಸಂಸ್ಥೆ ಮುಖ್ಯಸ್ಥ, ಸಿಇಒ ಅವಿನಾಶ್ ರಾವ್, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಿಮ್ಮ ಸುತ್ತಮುತ್ತಲಿರುವ ಜನರೊಂದಿಗೆ ಸಂವಹನ ನಡೆಸಿ, ಅವರ ಜೀವನ ಅನುಭವಗಳಿಂದ ಪ್ರೇರಿತರಾಗಿರಿ. ಉತ್ತಮ ನಾಯಕನಾಗಲು ತಂಡದೊಂದಿಗೆ ಕೆಲಸ ಮಾಡುವುದು ಅಗತ್ಯ. ಉತ್ತಮ ಸಂವಹನವು ವ್ಯವಹಾರ ಅಭಿವೃದ್ಧಿಗೆ ಅತ್ಯಗತ್ಯ ಎಂದರು.

ಶ್ರೀನಿವಾಸ್ ವಿವಿ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಮುಖ್ಯಸ್ಥ ಡಾ. ರಾಮಕೃಷ್ಣಎನ್. ಹೆಗಡೆ ಸ್ವಾಗತಿಸಿದರು. ಟೆಕ್ ಯುವ ಕಾರ್ಯಕ್ರಮದ ಸಂಚಾಲಕ ಪ್ರೊ. ಕೆ.ಶ್ರೀನಾಥ್ ರಾವ್ ಅತಿಥಿ ಪರಿಚಯ ಮಾಡಿದರು. ವಿವಿ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಡಾ. ಶ್ವೇತಾ ಪೈ ವಂದಿಸಿದರು. ವಿವಿ ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಪ್ರವೀಣ್ ಬಿ.ಎಂ., ಟೆಕ್ ಯುವ-25 ರ ವಿದ್ಯಾರ್ಥಿ ಸಮನ್ವಯ ಕಾರರಾದ ಮೊಹಮ್ಮದ್ ಸೈಫಾಜ್, ಆಕಾಶ್ ಕುಲಾಲ್, ಚೈತ್ರಾ ರಾವ್, ಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸ್ಯಾಮ್ ಅವಿನ್ ಬಂಗೇರಾ ನಿರೂಪಿಸಿದರು.

Related posts

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya
error: Content is protected !!