23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

ಮಂಗಳೂರು: ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಯಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ ‘ಟೆಕ್ ಯುವ – 25’ ಮಾ.12 ರಂದು ಉದ್ಘಾಟನೆಗೊಂಡಿತು.

ಬೆಂಗಳೂರಿನ ಐಸ್ಪಿ ಆಕ್ರೋ ರೋಬೋಟಿಕ್ಸ್ ಹಾಗೂ ಮಂಗಳೂರಿನ ಅಗ್ರಿಲೀಫ್ ಪೈವೇಟ್ ಲಿಮಿಟೆಡ್ ಸಂಸ್ಥೆ ಮುಖ್ಯಸ್ಥ, ಸಿಇಒ ಅವಿನಾಶ್ ರಾವ್, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಿಮ್ಮ ಸುತ್ತಮುತ್ತಲಿರುವ ಜನರೊಂದಿಗೆ ಸಂವಹನ ನಡೆಸಿ, ಅವರ ಜೀವನ ಅನುಭವಗಳಿಂದ ಪ್ರೇರಿತರಾಗಿರಿ. ಉತ್ತಮ ನಾಯಕನಾಗಲು ತಂಡದೊಂದಿಗೆ ಕೆಲಸ ಮಾಡುವುದು ಅಗತ್ಯ. ಉತ್ತಮ ಸಂವಹನವು ವ್ಯವಹಾರ ಅಭಿವೃದ್ಧಿಗೆ ಅತ್ಯಗತ್ಯ ಎಂದರು.

ಶ್ರೀನಿವಾಸ್ ವಿವಿ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಮುಖ್ಯಸ್ಥ ಡಾ. ರಾಮಕೃಷ್ಣಎನ್. ಹೆಗಡೆ ಸ್ವಾಗತಿಸಿದರು. ಟೆಕ್ ಯುವ ಕಾರ್ಯಕ್ರಮದ ಸಂಚಾಲಕ ಪ್ರೊ. ಕೆ.ಶ್ರೀನಾಥ್ ರಾವ್ ಅತಿಥಿ ಪರಿಚಯ ಮಾಡಿದರು. ವಿವಿ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಡಾ. ಶ್ವೇತಾ ಪೈ ವಂದಿಸಿದರು. ವಿವಿ ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಪ್ರವೀಣ್ ಬಿ.ಎಂ., ಟೆಕ್ ಯುವ-25 ರ ವಿದ್ಯಾರ್ಥಿ ಸಮನ್ವಯ ಕಾರರಾದ ಮೊಹಮ್ಮದ್ ಸೈಫಾಜ್, ಆಕಾಶ್ ಕುಲಾಲ್, ಚೈತ್ರಾ ರಾವ್, ಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸ್ಯಾಮ್ ಅವಿನ್ ಬಂಗೇರಾ ನಿರೂಪಿಸಿದರು.

Related posts

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya
error: Content is protected !!