23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಸಹಯೋಗದಲ್ಲಿ ನಡೆಸಲಾಯಿತು.

ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಮಾಜದ ಒಳಿತಿಗಾಗಿ ನೂರಾರು ಯೋಜನೆಗಳನ್ನು ಹಮ್ಮಿಕೊಂಡು ಸಮಾಜಮುಖಿ ಸೇವೆ ಮಾಡುತ್ತಿರುವ ಡಾ| ವೀರೇಂದ್ರ ಹೆಗ್ಗಡೆಯವರು ಜನರ ಆರೋಗ್ಯದ ಬಗ್ಗೆ ಅತೀವ ಕಾಳಜಿ ಹೊಂದಿದ್ದಾರೆ. ಗ್ರಾಮೀಣ ಭಾಗದ ಜನರಿಗೆ ವೈದ್ಯಕೀಯ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಈ ಶಿಬಿರವನ್ನು ನಡೆಸಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ವಿಶ್ವದಲ್ಲಿ ಪ್ರತಿ ವರ್ಷ 6 ಲಕ್ಷಕ್ಕೂ ಅಧಿಕ ಗರ್ಭಕಂಠದ ಕ್ಯಾನ್ಸರ್ ಪತ್ತೆಯಾಗುತ್ತಿದೆ. ಇದರಿಂದ ಮೂರುವರೆ ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ. ಇದನ್ನು ತಡೆಯುವ ಉದ್ದೇಶದಿಂದ ರೋಟರಿ ಕ್ಲಬ್ ವತಿಯಿಂದ ಇಂತಹ ವ್ಯಾಕ್ಷಿನೇಷನ್ ನೀಡಲಾಗುತ್ತಿದೆ ಎಂದರು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಪೂಜ್ಯ ಡಾ| ವೀರೇಂದ್ರ ಹೆಗ್ಗಡೆಯವರು ಸಾರ್ವಜನಿಕ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಿಗೆ ಹೆಚ್ಚಿನ ಮಹತ್ವ ನೀಡುತ್ತಾರೆ. ಈ ಆಸ್ಪತ್ರೆಯ ನಿರ್ಮಾಣದ ಉದ್ದೇಶ ಕೇವಲ ವೈದ್ಯಕೀಯ ಸೇವೆ ನೀಡುವುದು ಮಾತ್ರವಲ್ಲ ಜೊತೆ-ಜೊತೆಗೆ ಗ್ರಾಮೀಣ ಜನತೆಗೆ ಆರೋಗ್ಯದ ಜಾಗೃತಿ ಮೂಡಿಸುವುದು ಕೂಡ ಆಗಿದೆ. ಬೆಳ್ತಂಗಡಿ ರೋಟರಿ ಕ್ಲಬ್ ಅತ್ಯುತ್ತಮ ಕೆಲಸ ಮಾಡುತ್ತಿದೆ. ಮೂರು ಸಾವಿರ ರೂಪಾಯಿ ಮೌಲ್ಯದ ಈ ಲಸಿಕೆಯನ್ನು ರಿಯಾಯತಿ ದರದಲ್ಲಿ ರೋಟರಿ ಕ್ಲಬ್ ಒದಗಿಸಿಕೊಡುತ್ತಿದೆ. ಈ ಲಸಿಕೆ ಇಂತಹ ಮಾರಕ ರೋಗವನ್ನು ತಡೆಯಲು ಸಹಕಾರಿಯಾಗಿದೆ ಎಂದರು.


ಬೆಳ್ತಂಗಡಿ ರೋಟರಿ ಕ್ಲಬ್ ಪೂರ್ವ ಕಾರ್ಯದರ್ಶಿ ಶ್ರೀಧರ್ ಕೆ.ವಿ, ಹಾಗೂ ಅಬೂಬಕ್ಕರ್ ಶಿಬಿರಕ್ಕೆ ಶುಭ ಹಾರೈಸಿದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೆಂದ್ರ ಕುಮಾರ್, ಮುಖ್ಯ ವೈದ್ಯಾಧಿಕಾರಿ ಡಾ. ಸಾತ್ವಿಕ್ ಜೈನ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ| ಅನ್ವಿತಾ ಶತಾನಂದ ಪ್ರಸಾದ್ ಉಪಸ್ಥಿತರಿದ್ದರು. ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ| ಪ್ರಿಯಾಂಕ ಜಯದೇವ್ ಲಸಿಕೆಯ ಮಹತ್ವವನ್ನು ವಿವರಿಸಿದರು. ಸಾರ್ವಜನಿಕ ಸಂಪರ್ಕಾಧಿಕಾರಿ ಚಿದಾನಂದ ಡಿ.ಅರ್ ಕಾರ್ಯಕ್ರಮ ನಿರೂಪಿಸಿದರು.112 ಮಂದಿ ಲಸಿಕೆ ಪಡೆದುಕೊಳ್ಳುವ ಮೂಲಕ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

Related posts

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya
error: Content is protected !!