March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷ,ನಿವೃತ್ತ ಡಿಎಫ್‌ಓ, ಅದಮ್ಯ ಚೇತನ ಅಮರತ್ವದೆಡೆಗೆ ದಿ. ಎನ್.ಪದ್ಮನಾಭ ಮಾಣಿಂಜರವರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ ಶ್ರದ್ಧಾಂಜಲಿ ಕಾರ್ಯಕ್ರಮ ಮಾ.15 ರಂದು ಬೆಳ್ತಂಗಡಿ ಶ್ರೀಗುರು ಸಾನಿಧ್ಯ ಸಭಾಭವನದಲ್ಲಿ ನಡೆಯಿತು.

ಬೆಂಗಳೂರು ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆರ್ಶೀವಚನ ನೀಡಿ ನಿರಂತರ ಉನ್ನತಿ ಹಾಗೂ ಒಳಿತಿನ ಚಿಂತನೆ ಮಾಡುವ ಮನಸ್ಸು ಪದ್ಮನಾಭರವರು.ಸಮಾಜದ ಬಗ್ಗೆ ಕಾಳಜಿ,ಹಿತ ಚಿಂತನೆ ಮಾಡಿದ ನಿಜವಾದ ರಾಜರ್ಷಿ ಪದ್ಮನಾಭರವರು ಎಂದು ನುಡಿದರು.

ಸಂಘದ ಉಪಾಧ್ಯಕ್ಷ ಭಗೀರಥ ಜಿ. ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆಯ ಅಧ್ಯಕ್ಷ ಶ್ರೀಧರ ಜಿ.ಭಿಡೆ, ಹಿರಿಯ ಪುತ್ರ ಸುಧೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಸುಜಿತಾ ವಿ ಬಂಗೇರ, ಕೆ.ಪಿ.ದಿವಾಕರ, ಧರ್ಣಪ್ಪ ಪೂಜಾರಿ, ಡಾ.ರಾಜರಾಮ ಕೆ.ಬಿ, ತನುಜಾ ಶೇಖರ್, ಧರಣೇಂದ್ರ ಕುಮಾರ್, ಚಿದಾನಂದ ಪೂಜಾರಿ ಎಲ್ದಕ, ಸಂಜೀವ ಪೂಜಾರಿ, ಚಂದ್ರಶೇಖರ್, ಗಂಗಾಧರ ಮಿತ್ತಮಾರು, ಜಯವಿಕ್ರಮ ಕಲ್ಲಾಪು, ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕ ಜಗದೀಶ್ಚಂದ್ರ ಡಿ.ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿ, ಸ್ವಾಗತಿಸಿದರು, ಪ್ರದೀಶ್ ನಡುವಾಲು ಕಾರ್ಯಕ್ರಮ ನಿರೂಪಿಸಿದರು, ನಿರ್ದೇಶಕ ಆನಂದ ಪೂಜಾರಿ ಸರ್ವೇದೋಳ ವಂದಿಸಿದರು. ಹಾಗೂ ಸಂಘದ ಸಿಬ್ಬಂದಿ ವರ್ಗ ಸಹಕರಿಸಿದರು.

ಕಾರ್ಯಕ್ರಮದಲ್ಲಿ ವಿವಿದ್ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಇತರರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!