23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಮೇಲ0ತಬೆಟ್ಟು: ಮೇಲಂತಬೆಟ್ಟುಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸವಿತಾ ರವರ ಅಧ್ಯಕ್ಷತೆಯಲ್ಲಿ ಮಾ.15ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಶಿಶು ಅಭಿವೃದ್ಧಿ ಇಲಾಖೆಯ ಶ್ರೀಮತಿ ವಾಣಿಶ್ರೀ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ಮೇಲಂತಬೆಟ್ಟು ಆರೋಗ್ಯ ಮತ್ತು ಕ್ಷೇಮ ಕೇಂದ್ರ-ಉಪಕೇಂದ್ರದ ವತಿಯಿಂದ ಉಚಿತ ಅಸಾಂಕ್ರಾಮಿಕ ರೋಗಗಳ (ಎನ್.ಸಿ.ಡಿ) ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಚಂದ್ರರಾಜ್ ಎಂ., ವೇಣುಗೋಪಾಲ ಶೆಟ್ಟಿ, ಶ್ರೀಮತಿ ದೀಪಿಕಾ, ಶ್ರೀಮತಿ ಹರೀಣಾಕ್ಷಿ, ಸಂತೋಷ್ ಕುಮಾರ್, ಚಂದ್ರಶೇಖರ್, ಪ್ರಭಾಕರ ಆಚಾರ್ಯ, ಶ್ರೀಮತಿ ಶಶಿಕಲಾ, ಶ್ರೀಮತಿ ಜಯಲಕ್ಷ್ಮೀ, ಶ್ರೀಮತಿ ಸುಮಲತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಸ್ವಾಗತಿಸಿದರು. ಪಂಚಾಯತ್ ಕಾರ್ಯದರ್ಶಿ ಹಾಗೂ ಪ್ರಭಾರ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಜಮಾ ಖರ್ಚು ವರದಿ ವಾಚಿಸಿ, ವಂದಿಸಿದರು.

Related posts

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya
error: Content is protected !!