34.4 C
ಪುತ್ತೂರು, ಬೆಳ್ತಂಗಡಿ
March 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿ ಶ್ರೀ ರಾಮನಗರ ಹಾರಬೆ ಇಲ್ಲಿ ದೈವಗಳ ವಾರ್ಷಿಕ ನೇಮೋತ್ಸವ ಮಾ 14 ರoದು ಜರಗಿತು.

ಬೆಳಿಗ್ಗೆ ಮಂಜುನಾಥ್ ಭಟ್ ಅಸ್ರಣ್ಣರು ಮಾಲಾಡಿ ಇವರ ಉಪಸ್ಥಿತಿಯಲ್ಲಿ ಗಣ ಹೋಮ, ನಾಗದೇವರಿಗೆ ತoಬಿಲ ಸೇವೆ , ಸಾಯಂಕಾಲ ಸತ್ಯನಾರಾಯಣ ಪೂಜೆ, ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆoಕಿ ಇವರಿಂದ ವಿಶೇಷ ಕುಣಿತ ಭಜನಾ ಕಾರ್ಯಕ್ರಮ, ಮಹಾಪೂಜೆ‌, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ನಂತರ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಜರಗಿತು. ನೇಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ವಿಶ್ವನಾಥ ಪೂಜಾರಿ ಹಾರಬೆ, ಪ್ರಧಾನ ಕಾರ್ಯದರ್ಶಿ ಮಹೇಶ್ ಕುಲಾಲ್ ಹಾರಬೆ, ಕೋಶಾಧಿಕಾರಿ ಪ್ರಮೀಳಾ ಹಾರಬೆ, ಸಮಿತಿಯ ಪದಾಧಿಕಾರಿಗಳು, ಸದಸ್ಯರು ‌ ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya
error: Content is protected !!